ವಿಜಯಪುರ: ಉಚ್ಛಾಟನೆ ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರುತ್ತಲೇ ಬರುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಪಕ್ಷದಿಂದ ಉಚ್ಛಾಟನೆಯನ್ನೇ ಸವಾಲಾಗಿ ಸ್ವೀಕರಿಸಿರುವ ಶಾಸಕ ಯತ್ನಾಳ್ ಅವರು, ಹೊಸ ಪಕ್ಷವನ್ನು ಸ್ಥಾಪನೆ ಮಾಡುವುದಾಗಿ ಗುಡುಗಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಹಿಂದೂಗಳ ರಕ್ಷಣೆ ಆಗಲ್ಲ. ಆದ್ದರಿಂದ ಹಿಂದೂಗಳ ರಕ್ಷಣೆಗೆ ಹೊಸ ಪಕ್ಷ ಕಟ್ಟುವ ಅನಿವಾರ್ಯತೆ ಬಂದಿದೆ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಜಯೇಂದ್ರ ಒಬ್ಬ ಮಹಾಭ್ರಷ್ಟ. ವಿಜಯೇಂದ್ರ ಮೇಲೆ ಸಾಕಷ್ಟು ಕೇಸ್ಗಳಿವೆ. ಇವರಿಂದ ಹಿಂದೂಗಳ ರಕ್ಷಣೆ ಆಗಲ್ಲ ಎಂದು ಕಿಡಿಕಾರಿದರು.
ಇನ್ನು ಜನರ ಅಭಿಪ್ರಾಯ ಸಂಗ್ರಹಿಸಿ ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುತ್ತೇನೆ. ಹಿಂದೂ ಪಕ್ಷ ಕಟ್ಟುವ ಬಗ್ಗೆ ಬೀದರ್ನಿಂದ ಹಿಡಿದು ಚಾಮರಾಜನಗರದವರೆಗೂ ಒತ್ತಾಯಿಸಿದ್ದಾರೆ. ವಿಜಯದಶಮಿ ವೇಳೆಗೆ ಹೊಸ ಪಕ್ಷದ ರಚನೆ ಮಾಡುತ್ತೇವೆ ಎಂದು ಯಡಿಯೂರಪ್ಪ ಕುಟುಂಬಕ್ಕೆ ಎಚ್ಚರಿಕೆ ನೀಡಿದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…