ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಮುಖಂಡರಿಂದ ರಾಜ್ಯಪಾಲರ ನಿಂದನೆ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ರಾಜ್ಯ ಸರ್ಕಾರದ ಸಚಿವರು, ಶಾಸಕರು ಸೇರಿದಂತೆ ಲಕ್ಷಾಂತರ ಜನತೆ ಸಿಎಂ ಸಿದ್ದರಾಮಯ್ಯ ಪರ ಇದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಿಡಿಕಾರಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…