ರಾಜ್ಯ

ವಿಪಕ್ಷ ನಾಯಕ ಆರ್‌.ಅಶೋಕ್‌ ವಿರುದ್ಧ ನಡೆದ ಷಡ್ಯಂತ್ರ ಕಂಡು ದಿಗ್ಬ್ರಮೆ: ಡಿಸಿಎಂ ಡಿಕೆಶಿ

ಬೆಂಗಳೂರು: ಶಾಸಕ ಮುನಿರತ್ನ ಅವರು ಆರ್‌.ಅಶೋಕ್‌ ವಿರುದ್ಧ HIV ಸೋಂಕು ಹರಡಲು ಷಡ್ಯಂತ್ರ ನಡೆಸಿದ್ದರು ಎಂಬ ಸುದ್ದಿ ನೋಡಿ ನನಗೆ ದಿಗ್ಬ್ರಮೆ ಆಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದರು.

ಇಂದು(ಸೆ.21) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಾಸಕ ಮುನಿರತ್ನ ಅವರು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮೇಲೆ HIV ಸೋಂಕು ಹರಡುವಿಕೆಯ ಸಂಚು ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಕೇಳಿ ನನಗೆ ದಿಗ್ಬ್ರಮೆಯಾಗುತ್ತಿದೆ. ವಿಪಕ್ಷ ನಾಯಕ ಆರ್‌.ಅಶೋಕ್‌ ಅವರ ಆರಂಭದ ಮಾತುಗಳನ್ನು ನೋಡಿದ್ದೀನಿ. ಆದರೆ ಎರಡನೇ ಬಾರಿ ಮಾತುಗಳನ್ನು ಕೇಳಿಲ್ಲ ಎಂದು ಹೇಳಿದರು.

ಶಾಸಕ ಮುನಿರತ್ನ ಅವರು ನಡೆಸಿರುವ ಸಂಚಿನ ಬಗ್ಗೆ ಅಶೋಕಣ್ಣ, ವಿಜಯೇಂದ್ರಣ್ಣ ಹಾಗೂ ಸಿ.ಟಿ.ರವಿಯಣ್ಣ ಅವರು ಈ ಸಂಚಿನ ಬಗ್ಗೆ ಮಾತನಾಡಲಿ, ಈ ಬಗ್ಗೆ ಸತ್ಯ ಏನಿದೆ ಎಂಬುದನ್ನು ಕುರಿತು ಪರಿಶೀಲಿಸಿ ತಿಳಿಸಬೇಕು. ನಂತರ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಂಸದ ಡಾ.ಮಂಜುನಾಥ್‌ ಅವರು ಸಹ ಉತ್ತರಿಸಬೇಕು ಎಂದು ಬಿಜೆಪಿ ಶಾಸಕರನ್ನು ಟೀಕಿಸಿದರು.

ಶಾಸಕ ಅಶ್ವತ್ಥ್ ನಾರಾಯಣ್‌ ಅವರು ಡಿ.ಕೆ.ಬ್ರದರ್ಸ್‌ ಅವರಿಂದ ಸಂಚು ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅಶ್ವತ್ಥ್ ಅವರು ನನ್ನನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಹೀಗಾಗಿ ಅವರು ನೀಡಿರುವ ಈ ಹೇಳಿಕೆಗೆ ನಾನು ಏನು ಹೇಳಲು ಸಾಧ್ಯವಿಲ್ಲ ಎಂದರು.

ಅರ್ಚನ ಎಸ್‌ ಎಸ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

2 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

5 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

6 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

7 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago