ರಾಜ್ಯ

ನಾನು ಈ ಭೂಮಿ ಮೇಲಿ ಅದೃಷ್ಟಶಾಲಿ ವ್ಯಕ್ತಿ: ಶಿಲ್ಪಿ ಅರುಣ್‌ ಯೋಗಿರಾಜ್‌ ಭಾವುಕ!

ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಭಾವುಕ ನುಡಿಗಳಾಗಿದೆ.

ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. ರಾಮಲಲ್ಲಾ ಪ್ರತಿಷ್ಠಾಪನೆಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿತ್ತು. ಈ ದಿನ ನನ್ನ ಬದುಕಿನ ಅವಿಸ್ಮರಣೀಯ ದಿನವಾಗಿದೆ. ನನ್ನ ಪೂರ್ವಜರು, ಕುಟುಂಬಸ್ಥರು, ಭಗವಾನ್‌ ಶ್ರೀರಾಮಲಲ್ಲಾರ ಆಶೀರ್ವಾದ ನನ್ನ ಮೇಲಿದೆ ಎಂದು ಅಯೋಧ್ಯೆ ರಾಮಮಂದಿರ ಸಮಾರಂಭದಲ್ಲಿ ಪಾಲ್ಗೊಂಡು ಸಂತಸ ಹಂಚಿಕೊಂಡಿದ್ದಾರೆ.

ಇಂದು (ಜನವರಿ 22) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿದ್ದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌. ವಿಗ್ರಹ ಕೆತ್ತನೆಗಾಗಿ ಅವರು 6 ತಿಂಗಳು ಸಮಯಾವಾಕಾಶ ತೆಗೆದುಕೊಂಡಿದ್ದರು.

ಮೈಸೂರು ಜಿಲ್ಲೆಯ ಹಾರೋಹಳ್ಳಿ ಗ್ರಾಮದ ಜಮೀನೊಂದರಲ್ಲಿ ಸಿಕ್ಕ ಕೃಷ್ಣ ಶಿಲೆಯಿಂದ ಈ ವಿಗ್ರಹವನ್ನು ಕೆತ್ತಲಾಗಿದೆ.

andolanait

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

21 mins ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

25 mins ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

31 mins ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

37 mins ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

11 hours ago