ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಭಾವುಕ ನುಡಿಗಳಾಗಿದೆ.
ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. ರಾಮಲಲ್ಲಾ ಪ್ರತಿಷ್ಠಾಪನೆಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿತ್ತು. ಈ ದಿನ ನನ್ನ ಬದುಕಿನ ಅವಿಸ್ಮರಣೀಯ ದಿನವಾಗಿದೆ. ನನ್ನ ಪೂರ್ವಜರು, ಕುಟುಂಬಸ್ಥರು, ಭಗವಾನ್ ಶ್ರೀರಾಮಲಲ್ಲಾರ ಆಶೀರ್ವಾದ ನನ್ನ ಮೇಲಿದೆ ಎಂದು ಅಯೋಧ್ಯೆ ರಾಮಮಂದಿರ ಸಮಾರಂಭದಲ್ಲಿ ಪಾಲ್ಗೊಂಡು ಸಂತಸ ಹಂಚಿಕೊಂಡಿದ್ದಾರೆ.
ಇಂದು (ಜನವರಿ 22) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್. ವಿಗ್ರಹ ಕೆತ್ತನೆಗಾಗಿ ಅವರು 6 ತಿಂಗಳು ಸಮಯಾವಾಕಾಶ ತೆಗೆದುಕೊಂಡಿದ್ದರು.
ಮೈಸೂರು ಜಿಲ್ಲೆಯ ಹಾರೋಹಳ್ಳಿ ಗ್ರಾಮದ ಜಮೀನೊಂದರಲ್ಲಿ ಸಿಕ್ಕ ಕೃಷ್ಣ ಶಿಲೆಯಿಂದ ಈ ವಿಗ್ರಹವನ್ನು ಕೆತ್ತಲಾಗಿದೆ.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…