ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಭಾವುಕ ನುಡಿಗಳಾಗಿದೆ.
ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. ರಾಮಲಲ್ಲಾ ಪ್ರತಿಷ್ಠಾಪನೆಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿತ್ತು. ಈ ದಿನ ನನ್ನ ಬದುಕಿನ ಅವಿಸ್ಮರಣೀಯ ದಿನವಾಗಿದೆ. ನನ್ನ ಪೂರ್ವಜರು, ಕುಟುಂಬಸ್ಥರು, ಭಗವಾನ್ ಶ್ರೀರಾಮಲಲ್ಲಾರ ಆಶೀರ್ವಾದ ನನ್ನ ಮೇಲಿದೆ ಎಂದು ಅಯೋಧ್ಯೆ ರಾಮಮಂದಿರ ಸಮಾರಂಭದಲ್ಲಿ ಪಾಲ್ಗೊಂಡು ಸಂತಸ ಹಂಚಿಕೊಂಡಿದ್ದಾರೆ.
ಇಂದು (ಜನವರಿ 22) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್. ವಿಗ್ರಹ ಕೆತ್ತನೆಗಾಗಿ ಅವರು 6 ತಿಂಗಳು ಸಮಯಾವಾಕಾಶ ತೆಗೆದುಕೊಂಡಿದ್ದರು.
ಮೈಸೂರು ಜಿಲ್ಲೆಯ ಹಾರೋಹಳ್ಳಿ ಗ್ರಾಮದ ಜಮೀನೊಂದರಲ್ಲಿ ಸಿಕ್ಕ ಕೃಷ್ಣ ಶಿಲೆಯಿಂದ ಈ ವಿಗ್ರಹವನ್ನು ಕೆತ್ತಲಾಗಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…