ರಾಜ್ಯ

ನಾನು ಈ ಭೂಮಿ ಮೇಲಿ ಅದೃಷ್ಟಶಾಲಿ ವ್ಯಕ್ತಿ: ಶಿಲ್ಪಿ ಅರುಣ್‌ ಯೋಗಿರಾಜ್‌ ಭಾವುಕ!

ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಭಾವುಕ ನುಡಿಗಳಾಗಿದೆ.

ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. ರಾಮಲಲ್ಲಾ ಪ್ರತಿಷ್ಠಾಪನೆಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿತ್ತು. ಈ ದಿನ ನನ್ನ ಬದುಕಿನ ಅವಿಸ್ಮರಣೀಯ ದಿನವಾಗಿದೆ. ನನ್ನ ಪೂರ್ವಜರು, ಕುಟುಂಬಸ್ಥರು, ಭಗವಾನ್‌ ಶ್ರೀರಾಮಲಲ್ಲಾರ ಆಶೀರ್ವಾದ ನನ್ನ ಮೇಲಿದೆ ಎಂದು ಅಯೋಧ್ಯೆ ರಾಮಮಂದಿರ ಸಮಾರಂಭದಲ್ಲಿ ಪಾಲ್ಗೊಂಡು ಸಂತಸ ಹಂಚಿಕೊಂಡಿದ್ದಾರೆ.

ಇಂದು (ಜನವರಿ 22) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿದ್ದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌. ವಿಗ್ರಹ ಕೆತ್ತನೆಗಾಗಿ ಅವರು 6 ತಿಂಗಳು ಸಮಯಾವಾಕಾಶ ತೆಗೆದುಕೊಂಡಿದ್ದರು.

ಮೈಸೂರು ಜಿಲ್ಲೆಯ ಹಾರೋಹಳ್ಳಿ ಗ್ರಾಮದ ಜಮೀನೊಂದರಲ್ಲಿ ಸಿಕ್ಕ ಕೃಷ್ಣ ಶಿಲೆಯಿಂದ ಈ ವಿಗ್ರಹವನ್ನು ಕೆತ್ತಲಾಗಿದೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago