ರಾಜ್ಯ

ಪತ್ನಿ ವರ್ತನೆಯಿಂದ ನೋವಾಗಿದ್ದರೆ ರಾಜ್ಯದ ಜನರ ಕ್ಷಮೆ ಕೇಳುತ್ತೇನೆ: ಎಚ್‌ಡಿ ರೇವಣ್ಣ

ಬೆಳಗಾವಿ : ಕಾರು ಮತ್ತು ಬೈಕ್‌ ನಡುವಿನ ಅಪಘಾತ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ವರ್ತನೆ ಬಗ್ಗೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಜನರ ಬಳಿ ಎಚ್‌ಡಿ ರೇವಣ್ಣ ಅವರು ಕ್ಷಮೆ ಕೋರಿದ್ದಾರೆ.

ಸುವರ್ಣಸೌಧದಲ್ಲಿ ಸೋಮವಾರ ಮಾತನಾಡಿ, ಪತ್ನಿ ವರ್ತನೆಯ ಬಗ್ಗೆ ಯಾರಿಗಾದರೂ ನೋವಾದರೆ ಕ್ಷಮೆ ಕೋರುತ್ತೇನೆ ಎಂದು ಎಚ್‌ಡಿ ರೇವಣ್ಣ ಹೇಳಿದ್ದಾರೆ.

” ಬೈಕ್ ಸವಾರ ಕುಡಿದು ಬೈಕ್ ಓಡಿಸಿದ್ದ. ನಾವೇನು ಅವರ ಬಳಿ ಡ್ಯಾಮೇಜ್ ಹಣ ಕೊಡಿ ಎಂದು ಕೇಳಲಿಲ್ಲ. ಏನಾದರೂ ಹೆಚ್ಚು ಕಮ್ಮಿ ಆಗಿದ್ರೆ ಯಾರು ಹೊಣೆ? ಈ ಸಂಬಂಧ ಬೇಕಾದರೆ ಭವಾನಿ ರೇವಣ್ಣ ಅವರಿಂದಲೂ ಕ್ಷಮೆ ಕೇಳಿಸುತ್ತೇನೆ. ಸಿಟ್ಟಾಗಿ ಭವಾನಿ ಮಾತನಾಡಿದ್ದಾರೆ ” ಎಂದರು.

ಬೈಕ್ ಅವನೇ ಬಂದು ಸೈಡ್ ನಿಂದ ಕಾರಿಗೆ ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಗಾಗುತ್ತಿತ್ತು? ಅವರು ಏನೂ ಅಹಂಕಾರ ಮಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು.‌ ಅವರು ಸಿಟ್ಟನಲ್ಲಿ ಮಾತನಾಡಿದ್ದಾರೆ. ನಮ್ಮ‌ ಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಲ್ಲ.‌ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್‌ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು? ಎಂದು ಪ್ರಶ್ನಿಸಿದರು.

ದೊಡ್ಡ ವಿಚಾರ ಮಾಡಬೇಡಿ: ಘಟನೆ ನಡೆದ ಬಳಿಕ ಠಾಣೆಗೆ ತಿಳಿಸಬೇಕಲ್ಲವಾ? ಯಾರಿಗಾದರೂ ನೋವಾಗಿದ್ದರು ವಿಷಾದ ವ್ಯಕ್ತಪಡಿಸುತ್ತೇನೆ. ಅವರು ಕುಡಿದು ಬಂದು ಮುಂದೆನೇ ಗುದ್ದಿದ್ದಾರೆ. ಕಾರಿನಲ್ಲಿದ್ದವರ ಪ್ರಾಣಕ್ಕೆ ತೊಂದರೆ ಆಗಿದ್ದರೆ? ಎಷ್ಟೇ ನಿಧಾನವಾಗಿ ಹೋಗಿದ್ದರು ಬಂದು ಮಧ್ಯದಲ್ಲಿ ಗುದ್ದಿದ್ದಾನೆ. ಅದನ್ನು ದೊಡ್ಡ ವಿಚಾರ ಮಾಡಬೇಡಿ ಎಂದು ಮನವಿ ಮಾಡಿದರು.

andolanait

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

20 mins ago

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…

22 mins ago

ಓದುಗರ ಪತ್ರ: ಇಷ್ಟೊಂದು ಸಿಗ್ನಲ್ ಲೈಟ್‌ಗಳು ಅಗತ್ಯವೇ?

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…

26 mins ago

ಓದುಗರ ಪತ್ರ: ಪಿಜ್ಜಾ,ಬರ್ಗರ್ ಸೆಂಟರ್ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇರಲಿ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…

29 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

2 hours ago

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…

2 hours ago