ಬೆಂಗಳೂರು : ಶತಶತಮಾನಗಳಿಂದ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚನೆಗೊಳಗಾಗಿದ್ದಾರೆ. ನಮ್ಮ ಇಡೀ ಊರಿನಲ್ಲಿ ಲಾಯರ್ ಆದವನು ನಾನು ಒಬ್ಬನೇ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಶಿಕ್ಷಣದ ಹಿಂದಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಕಾಳಿದಾಸ ಹೆಲ್ತ್ ಆಂಡ್ ಎಜುಕೇಶನ್ ಟ್ರಸ್ಟ್ ವತಿಯಿಂದ ವಸಂತ ನಗರದ ದೇವರಾಜ್ ಅರಸು ಭವನದಲ್ಲಿ ನಡೆದ ಪ್ರೇರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಸಿಎಂ, ನಮ್ಮ ಊರಲ್ಲಿ ಪದವೀಧರರು ಇದ್ದರು. ಆದರೆ ಲಾಯರ್ ಆಗಿದ್ದು ನಾನೇ. ನಮ್ಮ ಅಪ್ಪ ನಮ್ಮೂರು ಶಾನುಭೋಗರ ಮಾತು ಕೇಳುತ್ತಿದ್ದರು. ನನಗೆ ಎಂಎಸ್ಸಿ ಸೀಟು ಸಿಗಲಿಲ್ಲ. ಆಮೇಲೆ ವ್ಯವಸಾಯ ಮಾಡುತ್ತಿದ್ದೆ. ಅದಾದ ಬಳಿಕ ಲಾ ಓದೋಕೆ ಹೋಗಿದ್ದೆ ಎಂದು ತಿಳಿಸಿದರು.
ನಮ್ಮ ಅಪ್ಪನಿಗೆ ನಾನು ಲಾ ಮಾಡ್ತೀನಿ ಅಂತ ಹೇಳಿದ್ದೆ. ಆಗ ಅವರು ಶಾನುಭೋಗರ ಹತ್ತಿರ ಹೋಗಿ ಕೇಳಿದ್ದರು. ಆಗ ಶಾನುಭೋಗರು ಕುರುಬರು ಲಾಯರ್ ಕೆಲಸ ಮಾಡೋಕೆ ಆಗುತ್ತಾ? ಬೇಡ ಎಂದು ಹೇಳಿದ್ದರು. ಅವರ ಮಾತು ಕೇಳಿ ನಮ್ಮ ಅಪ್ಪ ನನಗೆ ಲಾಯರ್ ಮಾಡಬೇಡ ಎಂದು ಹೇಳಿದ್ರು. ಆದರೂ ಕೂಡಾ ನಾನು ಲಾಯರ್ ಓದಿದೆ. ಬಳಿಕ ಶಾನುಭೋಗರ ಆಸ್ತಿ ವಿಚಾರಕ್ಕೆ ನಾನೇ ಲಾಯರ್ ಆದೆ. ಆಗ ಶಾನುಭೋಗರು ಏನು ಮಾತಾಡದೇ ಸುಮ್ಮನೆ ಆದರು ಎಂದು ಸಿಎಂ ತಮ್ಮ ಲಾ ಜೀವನದ ನೆನಪನ್ನು ಬಿಚ್ಚಿಟ್ಟರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…