ಬೆಂಗಳೂರು : ಶತಶತಮಾನಗಳಿಂದ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚನೆಗೊಳಗಾಗಿದ್ದಾರೆ. ನಮ್ಮ ಇಡೀ ಊರಿನಲ್ಲಿ ಲಾಯರ್ ಆದವನು ನಾನು ಒಬ್ಬನೇ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಶಿಕ್ಷಣದ ಹಿಂದಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಕಾಳಿದಾಸ ಹೆಲ್ತ್ ಆಂಡ್ ಎಜುಕೇಶನ್ ಟ್ರಸ್ಟ್ ವತಿಯಿಂದ ವಸಂತ ನಗರದ ದೇವರಾಜ್ ಅರಸು ಭವನದಲ್ಲಿ ನಡೆದ ಪ್ರೇರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಸಿಎಂ, ನಮ್ಮ ಊರಲ್ಲಿ ಪದವೀಧರರು ಇದ್ದರು. ಆದರೆ ಲಾಯರ್ ಆಗಿದ್ದು ನಾನೇ. ನಮ್ಮ ಅಪ್ಪ ನಮ್ಮೂರು ಶಾನುಭೋಗರ ಮಾತು ಕೇಳುತ್ತಿದ್ದರು. ನನಗೆ ಎಂಎಸ್ಸಿ ಸೀಟು ಸಿಗಲಿಲ್ಲ. ಆಮೇಲೆ ವ್ಯವಸಾಯ ಮಾಡುತ್ತಿದ್ದೆ. ಅದಾದ ಬಳಿಕ ಲಾ ಓದೋಕೆ ಹೋಗಿದ್ದೆ ಎಂದು ತಿಳಿಸಿದರು.
ನಮ್ಮ ಅಪ್ಪನಿಗೆ ನಾನು ಲಾ ಮಾಡ್ತೀನಿ ಅಂತ ಹೇಳಿದ್ದೆ. ಆಗ ಅವರು ಶಾನುಭೋಗರ ಹತ್ತಿರ ಹೋಗಿ ಕೇಳಿದ್ದರು. ಆಗ ಶಾನುಭೋಗರು ಕುರುಬರು ಲಾಯರ್ ಕೆಲಸ ಮಾಡೋಕೆ ಆಗುತ್ತಾ? ಬೇಡ ಎಂದು ಹೇಳಿದ್ದರು. ಅವರ ಮಾತು ಕೇಳಿ ನಮ್ಮ ಅಪ್ಪ ನನಗೆ ಲಾಯರ್ ಮಾಡಬೇಡ ಎಂದು ಹೇಳಿದ್ರು. ಆದರೂ ಕೂಡಾ ನಾನು ಲಾಯರ್ ಓದಿದೆ. ಬಳಿಕ ಶಾನುಭೋಗರ ಆಸ್ತಿ ವಿಚಾರಕ್ಕೆ ನಾನೇ ಲಾಯರ್ ಆದೆ. ಆಗ ಶಾನುಭೋಗರು ಏನು ಮಾತಾಡದೇ ಸುಮ್ಮನೆ ಆದರು ಎಂದು ಸಿಎಂ ತಮ್ಮ ಲಾ ಜೀವನದ ನೆನಪನ್ನು ಬಿಚ್ಚಿಟ್ಟರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…