ರಾಜ್ಯ

ಲಾ ಓದ್ಬೇಡ ಎಂದಿದ್ದ ಶಾನುಭೋಗರ ಆಸ್ತಿಗೆ ನಾನೇ ಲಾಯರ್ ಆದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶತಶತಮಾನಗಳಿಂದ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚನೆಗೊಳಗಾಗಿದ್ದಾರೆ. ನಮ್ಮ ಇಡೀ ಊರಿನಲ್ಲಿ ಲಾಯರ್ ಆದವನು ನಾನು ಒಬ್ಬನೇ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಶಿಕ್ಷಣದ ಹಿಂದಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಕಾಳಿದಾಸ ಹೆಲ್ತ್ ಆಂಡ್ ಎಜುಕೇಶನ್ ಟ್ರಸ್ಟ್ ವತಿಯಿಂದ ವಸಂತ ನಗರದ ದೇವರಾಜ್ ಅರಸು ಭವನದಲ್ಲಿ ನಡೆದ ಪ್ರೇರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಸಿಎಂ, ನಮ್ಮ ಊರಲ್ಲಿ ಪದವೀಧರರು ಇದ್ದರು. ಆದರೆ ಲಾಯರ್ ಆಗಿದ್ದು ನಾನೇ. ನಮ್ಮ ಅಪ್ಪ ನಮ್ಮೂರು ಶಾನುಭೋಗರ ಮಾತು ಕೇಳುತ್ತಿದ್ದರು. ನನಗೆ ಎಂಎಸ್‌ಸಿ ಸೀಟು ಸಿಗಲಿಲ್ಲ. ಆಮೇಲೆ ವ್ಯವಸಾಯ ಮಾಡುತ್ತಿದ್ದೆ. ಅದಾದ ಬಳಿಕ ಲಾ ಓದೋಕೆ ಹೋಗಿದ್ದೆ ಎಂದು ತಿಳಿಸಿದರು.

ನಮ್ಮ ಅಪ್ಪನಿಗೆ ನಾನು ಲಾ ಮಾಡ್ತೀನಿ ಅಂತ ಹೇಳಿದ್ದೆ. ಆಗ ಅವರು ಶಾನುಭೋಗರ ಹತ್ತಿರ ಹೋಗಿ ಕೇಳಿದ್ದರು. ಆಗ ಶಾನುಭೋಗರು ಕುರುಬರು ಲಾಯರ್ ಕೆಲಸ ಮಾಡೋಕೆ ಆಗುತ್ತಾ? ಬೇಡ ಎಂದು ಹೇಳಿದ್ದರು. ಅವರ ಮಾತು ಕೇಳಿ ನಮ್ಮ ಅಪ್ಪ ನನಗೆ ಲಾಯರ್ ಮಾಡಬೇಡ ಎಂದು ಹೇಳಿದ್ರು. ಆದರೂ ಕೂಡಾ ನಾನು ಲಾಯರ್ ಓದಿದೆ. ಬಳಿಕ ಶಾನುಭೋಗರ ಆಸ್ತಿ ವಿಚಾರಕ್ಕೆ ನಾನೇ ಲಾಯರ್ ಆದೆ. ಆಗ ಶಾನುಭೋಗರು ಏನು ಮಾತಾಡದೇ ಸುಮ್ಮನೆ ಆದರು ಎಂದು ಸಿಎಂ ತಮ್ಮ ಲಾ ಜೀವನದ ನೆನಪನ್ನು ಬಿಚ್ಚಿಟ್ಟರು.

lokesh

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago