ರಾಜ್ಯ

ನಾನು ಹೊಸ ತಲೆಮಾರಿನವ, ಹಾಗಾಗಿ ಬೇಗ ಕೆಲಸ ಆಗಬೇಕು: ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಇದು ಪ್ರಧಾನಿ ನರೇಂದ್ರ ಮೋದಿ ಅವರ ಕಾಲ. ಶಂಕುಸ್ಥಾಪನೆಯನ್ನು ಒಬ್ಬರು ಮತ್ತು ಉದ್ಘಾಟನೆಯನ್ನು ಇನ್ನೊಬ್ಬರು ಮಾಡುವ ಸಮಯ ಮುಗಿದು ಹೋಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಪರೋಕ್ಷವಾಗಿ ಡಿಸಿಎಂ ಶಿವಕುಮಾರ್ ಅವರಿಗೆ ತಿರುಗೇಟು ನೀಡಿರುವ ಅವರು, ನಾನು ಹೊಸ ತಲೆಮಾರಿನವ, ಹಾಗಾಗಿ ಬೇಗ ಕೆಲಸ ಆಗಬೇಕು ಎನ್ನುವವನು. ಇಂದಿರಾ ಗಾಂಧಿ ಶಂಕುಸ್ಥಾಪನೆ ಮಾಡಿ, ಸೋನಿಯಾ ಗಾಂಧಿ ಉದ್ಘಾಟನೆ ಮಾಡುವ ಸಮಯ ಮುಗಿದಿದೆ. ಇದು ಮೋದಿ ಕಾಲ, ಎಲ್ಲವೂ ವೇಗವಾಗಿ ನಡೆಯುತ್ತವೆ. ಆದರೆ ವಿಳಂಬ ಮಾಡುವುದೇ ಕಾಂಗ್ರೆಸ್ ಪಕ್ಷದವರ ಕಥೆ ಎಂದು ಟಾಂಗ್ ನೀಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳದಿ ಲೈನ್ ಮೆಟ್ರೊವನ್ನು ಏಕೆ ಆತುರದಲ್ಲಿ ಮಾಡಿದರು ಅಂಥ ಬೈಯುತ್ತಿರುವವರು, ಇವರ ಕೊಡುಗೆ ಏನು? ಸಮಸ್ಯೆಗಳು ಇದ್ದಾಗ ಎಲ್ಲಿ ಹೋಗಿದ್ದರು ಇವರು. ಮೆಟ್ರೋಗೆ ನಾಲ್ಕು ವರ್ಷ ಎಂ.ಡಿ ಇರಲಿಲ್ಲ. ಬಿಎಂಆರ್‍ಸಿಎಲ್ ಎರಡು ವರ್ಷದಲ್ಲಿ ಅರ್ಧ ಡಜೆನ್ ಸಮಯ ಮುಹೂರ್ತ ಫಿಕ್ಸ್ ಮಾಡಿ, ಮುಂದೂಡಿಕೆ ಮಾಡಿದೆ ಎಂದರು.‌

ವೇಗವಾಗಿ ಕೆಲಸ ಮಾಡುವ ಸಮಯ ಇದು. ಆಲಮಟ್ಟಿಗೆ ಶಾಸ್ತ್ರೀಯವರು ಅಡಿಗಲ್ಲು ಹಾಕಿ, ಮನಮೋಹನ್ ಸಿಂಗ್ ಉದ್ಘಾಟನೆ ಮಾಡಿದರು. ಕಾಂಗ್ರೆಸ್‍ನವರು ಈ ವೇಗದಲ್ಲಿ ದೇಶ ನಡೆಸಿದ್ದಾರೆ. ಜಿರೋ ಟ್ರಾಫಿಕ್‍ನಲ್ಲಿ ಓಡಾಡುವವರಿಗೆ ಮೆಟ್ರೋ ಅವಶ್ಯಕತೆ ಬಗ್ಗೆ ಏನು ಗೊತ್ತಾಗುತ್ತೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

3 mins ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

8 mins ago

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…

26 mins ago

ನೆತನ್ಯಾಹು ಬದುಕಿದ್ದಾರೆ, ಹತ್ಯೆ ವದಂತಿ ಸುಳ್ಳು ; ಇಸ್ರೇಲ್‌

ಜೆರುಸಲೆಮ್‌ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು…

46 mins ago

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

2 hours ago

ಹನೂರು | ಸುಗಮ ಸಂಚಾರಕ್ಕೆ 4.5ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…

2 hours ago