ನವದೆಹಲಿ: ಇದು ಪ್ರಧಾನಿ ನರೇಂದ್ರ ಮೋದಿ ಅವರ ಕಾಲ. ಶಂಕುಸ್ಥಾಪನೆಯನ್ನು ಒಬ್ಬರು ಮತ್ತು ಉದ್ಘಾಟನೆಯನ್ನು ಇನ್ನೊಬ್ಬರು ಮಾಡುವ ಸಮಯ ಮುಗಿದು ಹೋಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಪರೋಕ್ಷವಾಗಿ ಡಿಸಿಎಂ ಶಿವಕುಮಾರ್ ಅವರಿಗೆ ತಿರುಗೇಟು ನೀಡಿರುವ ಅವರು, ನಾನು ಹೊಸ ತಲೆಮಾರಿನವ, ಹಾಗಾಗಿ ಬೇಗ ಕೆಲಸ ಆಗಬೇಕು ಎನ್ನುವವನು. ಇಂದಿರಾ ಗಾಂಧಿ ಶಂಕುಸ್ಥಾಪನೆ ಮಾಡಿ, ಸೋನಿಯಾ ಗಾಂಧಿ ಉದ್ಘಾಟನೆ ಮಾಡುವ ಸಮಯ ಮುಗಿದಿದೆ. ಇದು ಮೋದಿ ಕಾಲ, ಎಲ್ಲವೂ ವೇಗವಾಗಿ ನಡೆಯುತ್ತವೆ. ಆದರೆ ವಿಳಂಬ ಮಾಡುವುದೇ ಕಾಂಗ್ರೆಸ್ ಪಕ್ಷದವರ ಕಥೆ ಎಂದು ಟಾಂಗ್ ನೀಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳದಿ ಲೈನ್ ಮೆಟ್ರೊವನ್ನು ಏಕೆ ಆತುರದಲ್ಲಿ ಮಾಡಿದರು ಅಂಥ ಬೈಯುತ್ತಿರುವವರು, ಇವರ ಕೊಡುಗೆ ಏನು? ಸಮಸ್ಯೆಗಳು ಇದ್ದಾಗ ಎಲ್ಲಿ ಹೋಗಿದ್ದರು ಇವರು. ಮೆಟ್ರೋಗೆ ನಾಲ್ಕು ವರ್ಷ ಎಂ.ಡಿ ಇರಲಿಲ್ಲ. ಬಿಎಂಆರ್ಸಿಎಲ್ ಎರಡು ವರ್ಷದಲ್ಲಿ ಅರ್ಧ ಡಜೆನ್ ಸಮಯ ಮುಹೂರ್ತ ಫಿಕ್ಸ್ ಮಾಡಿ, ಮುಂದೂಡಿಕೆ ಮಾಡಿದೆ ಎಂದರು.
ವೇಗವಾಗಿ ಕೆಲಸ ಮಾಡುವ ಸಮಯ ಇದು. ಆಲಮಟ್ಟಿಗೆ ಶಾಸ್ತ್ರೀಯವರು ಅಡಿಗಲ್ಲು ಹಾಕಿ, ಮನಮೋಹನ್ ಸಿಂಗ್ ಉದ್ಘಾಟನೆ ಮಾಡಿದರು. ಕಾಂಗ್ರೆಸ್ನವರು ಈ ವೇಗದಲ್ಲಿ ದೇಶ ನಡೆಸಿದ್ದಾರೆ. ಜಿರೋ ಟ್ರಾಫಿಕ್ನಲ್ಲಿ ಓಡಾಡುವವರಿಗೆ ಮೆಟ್ರೋ ಅವಶ್ಯಕತೆ ಬಗ್ಗೆ ಏನು ಗೊತ್ತಾಗುತ್ತೆ ಎಂದು ವಾಗ್ದಾಳಿ ನಡೆಸಿದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…