ರಾಜ್ಯ

ನಾನು ಹೊಸ ತಲೆಮಾರಿನವ, ಹಾಗಾಗಿ ಬೇಗ ಕೆಲಸ ಆಗಬೇಕು: ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಇದು ಪ್ರಧಾನಿ ನರೇಂದ್ರ ಮೋದಿ ಅವರ ಕಾಲ. ಶಂಕುಸ್ಥಾಪನೆಯನ್ನು ಒಬ್ಬರು ಮತ್ತು ಉದ್ಘಾಟನೆಯನ್ನು ಇನ್ನೊಬ್ಬರು ಮಾಡುವ ಸಮಯ ಮುಗಿದು ಹೋಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಪರೋಕ್ಷವಾಗಿ ಡಿಸಿಎಂ ಶಿವಕುಮಾರ್ ಅವರಿಗೆ ತಿರುಗೇಟು ನೀಡಿರುವ ಅವರು, ನಾನು ಹೊಸ ತಲೆಮಾರಿನವ, ಹಾಗಾಗಿ ಬೇಗ ಕೆಲಸ ಆಗಬೇಕು ಎನ್ನುವವನು. ಇಂದಿರಾ ಗಾಂಧಿ ಶಂಕುಸ್ಥಾಪನೆ ಮಾಡಿ, ಸೋನಿಯಾ ಗಾಂಧಿ ಉದ್ಘಾಟನೆ ಮಾಡುವ ಸಮಯ ಮುಗಿದಿದೆ. ಇದು ಮೋದಿ ಕಾಲ, ಎಲ್ಲವೂ ವೇಗವಾಗಿ ನಡೆಯುತ್ತವೆ. ಆದರೆ ವಿಳಂಬ ಮಾಡುವುದೇ ಕಾಂಗ್ರೆಸ್ ಪಕ್ಷದವರ ಕಥೆ ಎಂದು ಟಾಂಗ್ ನೀಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳದಿ ಲೈನ್ ಮೆಟ್ರೊವನ್ನು ಏಕೆ ಆತುರದಲ್ಲಿ ಮಾಡಿದರು ಅಂಥ ಬೈಯುತ್ತಿರುವವರು, ಇವರ ಕೊಡುಗೆ ಏನು? ಸಮಸ್ಯೆಗಳು ಇದ್ದಾಗ ಎಲ್ಲಿ ಹೋಗಿದ್ದರು ಇವರು. ಮೆಟ್ರೋಗೆ ನಾಲ್ಕು ವರ್ಷ ಎಂ.ಡಿ ಇರಲಿಲ್ಲ. ಬಿಎಂಆರ್‍ಸಿಎಲ್ ಎರಡು ವರ್ಷದಲ್ಲಿ ಅರ್ಧ ಡಜೆನ್ ಸಮಯ ಮುಹೂರ್ತ ಫಿಕ್ಸ್ ಮಾಡಿ, ಮುಂದೂಡಿಕೆ ಮಾಡಿದೆ ಎಂದರು.‌

ವೇಗವಾಗಿ ಕೆಲಸ ಮಾಡುವ ಸಮಯ ಇದು. ಆಲಮಟ್ಟಿಗೆ ಶಾಸ್ತ್ರೀಯವರು ಅಡಿಗಲ್ಲು ಹಾಕಿ, ಮನಮೋಹನ್ ಸಿಂಗ್ ಉದ್ಘಾಟನೆ ಮಾಡಿದರು. ಕಾಂಗ್ರೆಸ್‍ನವರು ಈ ವೇಗದಲ್ಲಿ ದೇಶ ನಡೆಸಿದ್ದಾರೆ. ಜಿರೋ ಟ್ರಾಫಿಕ್‍ನಲ್ಲಿ ಓಡಾಡುವವರಿಗೆ ಮೆಟ್ರೋ ಅವಶ್ಯಕತೆ ಬಗ್ಗೆ ಏನು ಗೊತ್ತಾಗುತ್ತೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago