ರಾಜ್ಯ

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ನೀಡಿದ್ದಾರೆ.

ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ. ಅದು ಕಲ್ಲು-ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ. ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವವರೆಗೂ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೂ ನಡೆಸುತ್ತೇನೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಹೇಳಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago