ರಾಜ್ಯ

ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ

ಬೆಂಗಳೂರು : ರಾಜಕೀಯ ನಿವೃತ್ತಿ ಎಂಬುದು ನನ್ನ ಸ್ವಯಂ ನಿರ್ಧಾರವೇ ಹೊರತು ಯಾರೊಬ್ಬರ ಒತ್ತಡಕ್ಕೆ ಮಣಿದು ನಾನು ಇಂತಹ ನಿರ್ಧಾರ ಕೈಗೊಂಡಿಲ್ಲ ಎಂದು ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವುದಿಲ್ಲ ಎಂಬುದು ಆಧಾರರಹಿತ ಹೇಳಿಕೆ. ಇದಕ್ಕೆ ನಾನು ಉತ್ತರ ಕೊಡಬೇಕಾದ ಅಗತ್ಯವೂ ಇಲ್ಲ. ನಾನು ಹೃದಯಾಂತರಾಳದಿಂದ ತೆಗೆದುಕೊಂಡ ನಿರ್ಧಾರವೇ ಹೊರತು ಇದರಲ್ಲಿ ಬಾಹ್ಯ ಒತ್ತಡ ಇಲ್ಲ ಎಂದು ಪುನರುಚ್ಚರಿಸಿದರು.

ನಾನು ಹನುಮಂತನಂತೆ ಎದೆ ಬಗೆದು ಶ್ರೀರಾಮನನ್ನು ತೋರಿಸಲು ಆಗುವುದಿಲ್ಲ. ಪಕ್ಷವು ಎಲ್ಲವನ್ನು ಕೊಟ್ಟಿರುವಾಗ ಯುವಕರಿಗೆ ಮನ್ನಣೆ ಸಿಗಬೇಕೆಂಬ ಕಾರಣಕ್ಕಾಗಿ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರವನ್ನು ಕೈಗೊಂಡಿದ್ದೇನೆ. ಇನ್ನು ಮುಂದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನಕೊಡುವೆ ಎಂದು ಹೇಳಿದರು.

ನನಗೆ ರಾಜಕೀಯ ನಿವೃತ್ತ ತೆಗೆದುಕೊಳ್ಳುವಂತೆ ಪಕ್ಷದ ವರಿಷ್ಠರು ಒತ್ತಡ ಹಾಕಿದ್ದರು ಎಂಬುದು ಶುದ್ದ ಸುಳ್ಳು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಮೊದಲ ಬಾರಿಗೆ ಶಾಸಕ ಸ್ಥಾನದಿಂದ ಹಿಡಿದು ಮುಖ್ಯಮಂತ್ರಿ ,ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಪಕ್ಷ ಕೊಟ್ಟಿದೆ. ಎಲ್ಲವನ್ನು ಅನುಭವಿಸಿರುವಾಗ ಉಳಿದಿರುವ ಅವಧಿಯಲ್ಲಿ ಪಕ್ಷದ ಸಂಘಟನೆಗೆ ತೊಡಗಿಸಿಕೊಳ್ಳುತ್ತೇನೆ ಎಂದರು.

ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಟ್ಟು ಹೋಗುವ ಆಲೋಚನೆಯನ್ನು ಎಂಥದ್ದೇ ಸಂದರ್ಭದಲ್ಲೂ ಮಾಡಿಲ್ಲ. ನಾನು ನಂಬಿರುವ ಸಿದ್ದಾಂತ ಬೇರೆ ಪಕ್ಷ ಸಿದ್ದಾಂತ ನನಗೆ ಹೊಂದಾಣಿಕೆಯಾಗುವುದಿಲ್ಲ. ನನ್ನ ಕೊನೆಯುಸಿರು ಇರುವವರೆಗೂ ಬಿಜೆಪಿಯೇ ನನ್ನ ಆಸ್ತಿ ಎಂದು ಪ್ರತಿಪಾದಿಸಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಯಾರೇ ಸ್ಪರ್ಧೆ ಮಾಡಿದರೂ ನನ್ನ ಅಭ್ಯಂತರವಿಲ್ಲ. ಪಕ್ಷ ಏನು ಸೂಚನೆ ಕೊಡುತ್ತದೆಯೋ ಅದನ್ನು ಶಿರಾಸವಹಿಸಿ ಮಾಡುವೆ. ಬರಲಿರುವ ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಗಳ ಪರವಾಗಿ ರಾಜ್ಯಾದ್ಯಂತ ಪ್ರಚಾರ ಮಾಡುತ್ತೇನೆ ಎಂದರು.

ಪ್ರಧಾನಿ ನರೇಂದ್ರಮೋದಿ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸಬೇಕು ಎಂಬುದು ಇಡೀ ಭಾರತೀಯರ ದೃಢಸಂಕಲ್ಪವಾಗಿದೆ. ಅದಕ್ಕಾಗಿ ನಾನು ಕೂಡ ನನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತೇನೆ. ಯಾವ ಸಿದ್ದಾಂತವನ್ನು ನಂಬಿ ಬಂದಿದ್ದೇನೋ ಅದೇ ಸಿದ್ದಾಂತಕ್ಕೆ ಬದ್ದನಾಗಿ ಮುನ್ನಡೆಯುತ್ತೇನೆ. ಗಾಳಿ ಸುದ್ದಿಗೆಲ್ಲ ಕಿವಿಗೊಡುವ ಅಗತ್ಯವಿಲ್ಲ ಎಂದು ಸದಾನಂದಗೌಡ ಹೇಳಿದರು.

andolanait

Recent Posts

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

22 mins ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

28 mins ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

5 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

5 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

5 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

5 hours ago