ರಾಜ್ಯ

ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ

ಬೆಂಗಳೂರು : ರಾಜಕೀಯ ನಿವೃತ್ತಿ ಎಂಬುದು ನನ್ನ ಸ್ವಯಂ ನಿರ್ಧಾರವೇ ಹೊರತು ಯಾರೊಬ್ಬರ ಒತ್ತಡಕ್ಕೆ ಮಣಿದು ನಾನು ಇಂತಹ ನಿರ್ಧಾರ ಕೈಗೊಂಡಿಲ್ಲ ಎಂದು ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವುದಿಲ್ಲ ಎಂಬುದು ಆಧಾರರಹಿತ ಹೇಳಿಕೆ. ಇದಕ್ಕೆ ನಾನು ಉತ್ತರ ಕೊಡಬೇಕಾದ ಅಗತ್ಯವೂ ಇಲ್ಲ. ನಾನು ಹೃದಯಾಂತರಾಳದಿಂದ ತೆಗೆದುಕೊಂಡ ನಿರ್ಧಾರವೇ ಹೊರತು ಇದರಲ್ಲಿ ಬಾಹ್ಯ ಒತ್ತಡ ಇಲ್ಲ ಎಂದು ಪುನರುಚ್ಚರಿಸಿದರು.

ನಾನು ಹನುಮಂತನಂತೆ ಎದೆ ಬಗೆದು ಶ್ರೀರಾಮನನ್ನು ತೋರಿಸಲು ಆಗುವುದಿಲ್ಲ. ಪಕ್ಷವು ಎಲ್ಲವನ್ನು ಕೊಟ್ಟಿರುವಾಗ ಯುವಕರಿಗೆ ಮನ್ನಣೆ ಸಿಗಬೇಕೆಂಬ ಕಾರಣಕ್ಕಾಗಿ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರವನ್ನು ಕೈಗೊಂಡಿದ್ದೇನೆ. ಇನ್ನು ಮುಂದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನಕೊಡುವೆ ಎಂದು ಹೇಳಿದರು.

ನನಗೆ ರಾಜಕೀಯ ನಿವೃತ್ತ ತೆಗೆದುಕೊಳ್ಳುವಂತೆ ಪಕ್ಷದ ವರಿಷ್ಠರು ಒತ್ತಡ ಹಾಕಿದ್ದರು ಎಂಬುದು ಶುದ್ದ ಸುಳ್ಳು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಮೊದಲ ಬಾರಿಗೆ ಶಾಸಕ ಸ್ಥಾನದಿಂದ ಹಿಡಿದು ಮುಖ್ಯಮಂತ್ರಿ ,ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಪಕ್ಷ ಕೊಟ್ಟಿದೆ. ಎಲ್ಲವನ್ನು ಅನುಭವಿಸಿರುವಾಗ ಉಳಿದಿರುವ ಅವಧಿಯಲ್ಲಿ ಪಕ್ಷದ ಸಂಘಟನೆಗೆ ತೊಡಗಿಸಿಕೊಳ್ಳುತ್ತೇನೆ ಎಂದರು.

ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಟ್ಟು ಹೋಗುವ ಆಲೋಚನೆಯನ್ನು ಎಂಥದ್ದೇ ಸಂದರ್ಭದಲ್ಲೂ ಮಾಡಿಲ್ಲ. ನಾನು ನಂಬಿರುವ ಸಿದ್ದಾಂತ ಬೇರೆ ಪಕ್ಷ ಸಿದ್ದಾಂತ ನನಗೆ ಹೊಂದಾಣಿಕೆಯಾಗುವುದಿಲ್ಲ. ನನ್ನ ಕೊನೆಯುಸಿರು ಇರುವವರೆಗೂ ಬಿಜೆಪಿಯೇ ನನ್ನ ಆಸ್ತಿ ಎಂದು ಪ್ರತಿಪಾದಿಸಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಯಾರೇ ಸ್ಪರ್ಧೆ ಮಾಡಿದರೂ ನನ್ನ ಅಭ್ಯಂತರವಿಲ್ಲ. ಪಕ್ಷ ಏನು ಸೂಚನೆ ಕೊಡುತ್ತದೆಯೋ ಅದನ್ನು ಶಿರಾಸವಹಿಸಿ ಮಾಡುವೆ. ಬರಲಿರುವ ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಗಳ ಪರವಾಗಿ ರಾಜ್ಯಾದ್ಯಂತ ಪ್ರಚಾರ ಮಾಡುತ್ತೇನೆ ಎಂದರು.

ಪ್ರಧಾನಿ ನರೇಂದ್ರಮೋದಿ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸಬೇಕು ಎಂಬುದು ಇಡೀ ಭಾರತೀಯರ ದೃಢಸಂಕಲ್ಪವಾಗಿದೆ. ಅದಕ್ಕಾಗಿ ನಾನು ಕೂಡ ನನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತೇನೆ. ಯಾವ ಸಿದ್ದಾಂತವನ್ನು ನಂಬಿ ಬಂದಿದ್ದೇನೋ ಅದೇ ಸಿದ್ದಾಂತಕ್ಕೆ ಬದ್ದನಾಗಿ ಮುನ್ನಡೆಯುತ್ತೇನೆ. ಗಾಳಿ ಸುದ್ದಿಗೆಲ್ಲ ಕಿವಿಗೊಡುವ ಅಗತ್ಯವಿಲ್ಲ ಎಂದು ಸದಾನಂದಗೌಡ ಹೇಳಿದರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago