ಬೆಂಗಳೂರು: ಖಾಸಗಿ ಕೆಲಸಗಳಿಗಾಗಿ ನಾನು ದೆಹಲಿ ಪ್ರವಾಸ ಮಾಡಿದ್ದು, ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ. ಹೊಸ ಕಚೇರಿ ನೋಡಲು ಹೋಗಿದ್ದೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಮಾತನಾಡಿಸಿಕೊಂಡು ಬಂದಿದ್ದೇನೆ. ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಭೇಟಿ ಮಾಡಿಲ್ಲ. ರಾಜಕೀಯದ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ರಾಜಕೀಯ ವಿಚಾರದ ಬಗ್ಗೆ ಯಾವುದನ್ನೂ ಅವರೊಂದಿಗೆ ಮಾತನಾಡಿಲ್ಲ. ಇದರಲ್ಲಿ ಮುಚ್ಚಿಡುವಂತದ್ದು ಏನೂ ಇಲ್ಲ. ಜನ ಸಮುದಾಯಕ್ಕೆ ಗೊತ್ತಾಗುವಂತಹ ವಿಚಾರಗಳೇ ರಾಜಕೀಯ. ಮುಚ್ಚಿಡುವಂತಹ ವಿಚಾರಗಳು ಏನೂ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಒಂದು ವೇಳೆ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿದ್ದರೆ, ಆ ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಇರಬಹುದು ಅಥವಾ ಸಿಎಂ ವಿಚಾರ ಇರಬಹುದು ಯಾವುದನ್ನೂ ಎಲ್ಲಿಯೂ ಮಾತನಾಡಿಲ್ಲ. ಇದು ನಿಮ್ಮ ಗಮನಕ್ಕೆ ಇರಲಿ ಎಂದು ಸ್ಪಷ್ಟನೆ ನೀಡಿದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…