ನವದೆಹಲಿ: ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಇಂದು(ಜೂ.6) ನಡೆದ ಎನ್ಡಿಎ ಮಿತ್ರ ಪಕ್ಷದ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಬಗ್ಗೆ ದೆಹಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದಿದ್ದಾರೆ.
ಈ ಸಭೆ ಪರಸ್ಪರ ಅಭಿನಂದಿಸುವ, ಶುಭಾಷಯ ಮಿನಿಮಯ ಮಾಡಿಕೊಳ್ಳುವ ಸಭೆಯಷ್ಟೆ, ಅಷ್ಟು ಬಿಟ್ಟರೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಮೋದಿ ಅವರು ಹೇಳಿದ್ದಾರೆ. ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚೆಯಾಗಿಲ್ಲ ಜೊತೆಗೆ ನಾನು ಕೂಡ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದ ಅವರು, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಎಂದರು.
ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಲು ಒತ್ತಾಯ
ಅತ್ತ ದೆಹಲಿಯಲ್ಲಿ ಕೃಷಿ ಸಚಿವ ಸ್ಥಾನ ಕೇವಲ ಊಹಾಪೋಹ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಅವರ ಅಭಿಮಾನಿಗಳು ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಅಷ್ಟೆ ಅಲ್ಲದೇ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆದ್ದ ಡಾ.ಸಿ.ಎನ್ ಮಂಜುನಾಥ್ ಅವರಿಗೂ ಸಹ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…