ನವದೆಹಲಿ: ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಇಂದು(ಜೂ.6) ನಡೆದ ಎನ್ಡಿಎ ಮಿತ್ರ ಪಕ್ಷದ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಬಗ್ಗೆ ದೆಹಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದಿದ್ದಾರೆ.
ಈ ಸಭೆ ಪರಸ್ಪರ ಅಭಿನಂದಿಸುವ, ಶುಭಾಷಯ ಮಿನಿಮಯ ಮಾಡಿಕೊಳ್ಳುವ ಸಭೆಯಷ್ಟೆ, ಅಷ್ಟು ಬಿಟ್ಟರೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಮೋದಿ ಅವರು ಹೇಳಿದ್ದಾರೆ. ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚೆಯಾಗಿಲ್ಲ ಜೊತೆಗೆ ನಾನು ಕೂಡ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದ ಅವರು, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಎಂದರು.
ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಲು ಒತ್ತಾಯ
ಅತ್ತ ದೆಹಲಿಯಲ್ಲಿ ಕೃಷಿ ಸಚಿವ ಸ್ಥಾನ ಕೇವಲ ಊಹಾಪೋಹ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಅವರ ಅಭಿಮಾನಿಗಳು ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಅಷ್ಟೆ ಅಲ್ಲದೇ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆದ್ದ ಡಾ.ಸಿ.ಎನ್ ಮಂಜುನಾಥ್ ಅವರಿಗೂ ಸಹ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…