ನವದೆಹಲಿ: ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಇಂದು(ಜೂ.6) ನಡೆದ ಎನ್ಡಿಎ ಮಿತ್ರ ಪಕ್ಷದ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಬಗ್ಗೆ ದೆಹಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದಿದ್ದಾರೆ.
ಈ ಸಭೆ ಪರಸ್ಪರ ಅಭಿನಂದಿಸುವ, ಶುಭಾಷಯ ಮಿನಿಮಯ ಮಾಡಿಕೊಳ್ಳುವ ಸಭೆಯಷ್ಟೆ, ಅಷ್ಟು ಬಿಟ್ಟರೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಮೋದಿ ಅವರು ಹೇಳಿದ್ದಾರೆ. ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚೆಯಾಗಿಲ್ಲ ಜೊತೆಗೆ ನಾನು ಕೂಡ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದ ಅವರು, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಎಂದರು.
ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಲು ಒತ್ತಾಯ
ಅತ್ತ ದೆಹಲಿಯಲ್ಲಿ ಕೃಷಿ ಸಚಿವ ಸ್ಥಾನ ಕೇವಲ ಊಹಾಪೋಹ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಅವರ ಅಭಿಮಾನಿಗಳು ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಅಷ್ಟೆ ಅಲ್ಲದೇ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆದ್ದ ಡಾ.ಸಿ.ಎನ್ ಮಂಜುನಾಥ್ ಅವರಿಗೂ ಸಹ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…