ಬೆಂಗಳೂರು: ಆರ್ಎಸ್ಎಸ್ ಬ್ಯಾನ್ ಮಾಡಬೇಕು ಎಂದು ನಾನು ಹೇಳಿಲ್ಲ. ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನೆಲ್ಲಿ ಆರ್ಎಸ್ಎಸ್ ನಿಷೇಧ ಮಾಡಬೇಕು ಎಂದು ಹೇಳಿದ್ದೇನೆ? ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಘಟ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದಿದ್ದೇನೆ ಅಷ್ಟೇ. ಆರ್ಎಸ್ಎಸ್ ಸಂಘಟನೆಯನ್ನು ಈವರೆಗೂ ನೋಂದಣಿ ಮಾಡಿಲ್ಲ. ಸಂಘ ರಿಜಿಸ್ಟರ್ ಆಗಿದ್ದರೆ ಕಾಪಿ ಕೊಡಲಿ. ಅವರ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲು 55 ವರ್ಷ ಬೇಕಾಯಿತು ಎಂದು ಹೇಳಿದರು.
ಇದನ್ನು ಓದಿ: ಆರ್ಎಸ್ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಹಿಸಿ: ಆರ್.ಅಶೋಕ್
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ನಾಯಕರು ಯಾಕೆ ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಗಣೇಶ ವೇಷ ಹಾಕಿಸಿ ಕೈಯಲ್ಲಿ ದೊಣ್ಣೆ ಹಿಡಿಸುವುದಿಲ್ಲ? ಬಡವರ ಮಕ್ಕಳನ್ನು ಆರ್ಎಸ್ಎಸ್ಗೆ ಸೆಳೆದು ಬಡವರ ಮಕ್ಕಳಿಗೆ ವೇಷ ತೊಡಿಸಿ ಪ್ರಚೋದನಕಾರಿ ಭಾಷಣ ಮಾಡುವುದು ಯಾಕೆ? ಈ ಬಗ್ಗೆ ಮೊದಲು ಬಿಜೆಪಿ ನಾಯಕರು, ಆರ್ಎಸ್ಎಸ್ನವರು ಉತ್ತರ ನೀಡಲಿ ಎಂದು ಹೇಳಿದರು.
ಇನ್ನು ಶಾಸಕ ಮುನಿರತ್ನ ಗಣವೇಷ ಹಾಕಿಕೊಂಡು, ಗಾಂಧೀಜಿ ಫೋಟೋ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದು, ಹಾಸ್ಯಾಸ್ಪದ. ಅವರಿಗೆ ಆರ್ಎಸ್ಎಸ್ ಇತಿಹಾಸ ಗೊತ್ತಿಲ್ಲ ಅನ್ನಿಸುತ್ತೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…