ಬೆಂಗಳೂರು: ಆರ್ಎಸ್ಎಸ್ ಬ್ಯಾನ್ ಮಾಡಬೇಕು ಎಂದು ನಾನು ಹೇಳಿಲ್ಲ. ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನೆಲ್ಲಿ ಆರ್ಎಸ್ಎಸ್ ನಿಷೇಧ ಮಾಡಬೇಕು ಎಂದು ಹೇಳಿದ್ದೇನೆ? ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಘಟ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದಿದ್ದೇನೆ ಅಷ್ಟೇ. ಆರ್ಎಸ್ಎಸ್ ಸಂಘಟನೆಯನ್ನು ಈವರೆಗೂ ನೋಂದಣಿ ಮಾಡಿಲ್ಲ. ಸಂಘ ರಿಜಿಸ್ಟರ್ ಆಗಿದ್ದರೆ ಕಾಪಿ ಕೊಡಲಿ. ಅವರ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲು 55 ವರ್ಷ ಬೇಕಾಯಿತು ಎಂದು ಹೇಳಿದರು.
ಇದನ್ನು ಓದಿ: ಆರ್ಎಸ್ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಹಿಸಿ: ಆರ್.ಅಶೋಕ್
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ನಾಯಕರು ಯಾಕೆ ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಗಣೇಶ ವೇಷ ಹಾಕಿಸಿ ಕೈಯಲ್ಲಿ ದೊಣ್ಣೆ ಹಿಡಿಸುವುದಿಲ್ಲ? ಬಡವರ ಮಕ್ಕಳನ್ನು ಆರ್ಎಸ್ಎಸ್ಗೆ ಸೆಳೆದು ಬಡವರ ಮಕ್ಕಳಿಗೆ ವೇಷ ತೊಡಿಸಿ ಪ್ರಚೋದನಕಾರಿ ಭಾಷಣ ಮಾಡುವುದು ಯಾಕೆ? ಈ ಬಗ್ಗೆ ಮೊದಲು ಬಿಜೆಪಿ ನಾಯಕರು, ಆರ್ಎಸ್ಎಸ್ನವರು ಉತ್ತರ ನೀಡಲಿ ಎಂದು ಹೇಳಿದರು.
ಇನ್ನು ಶಾಸಕ ಮುನಿರತ್ನ ಗಣವೇಷ ಹಾಕಿಕೊಂಡು, ಗಾಂಧೀಜಿ ಫೋಟೋ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದು, ಹಾಸ್ಯಾಸ್ಪದ. ಅವರಿಗೆ ಆರ್ಎಸ್ಎಸ್ ಇತಿಹಾಸ ಗೊತ್ತಿಲ್ಲ ಅನ್ನಿಸುತ್ತೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…