ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರಿಂದ ಹಿರೇಬಾಗೆವಾಡಿ ಪೊಲೀಸರು ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಖಾನಾಪುರ ಠಾಣೆಯಲ್ಲಿ ಹೇಳಿಕೆ ದಾಖಲಿಸಿಕೊಂಡ ಪೊಲೀಸರು, ಇದರ ವಿಡಿಯೊ ಚಿತ್ರೀಕರಣ ಕೂಡ ಮಾಡಿದರು.
ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿದೆ ಎಂದು ಸಿ.ಟಿ ರವಿ ಹೇಳಿಕೆ ನೀಡಿದ್ದಾರೆ.
ವಿಚಾರಣೆ ಮುಗಿಸಿದ ಹಿರೇಬಾಗೆವಾಡಿ ಇನ್ಸ್ಪೆಕ್ಟರ್ ಆರ್.ಆರ್ ಪಾಟೀಲ್ ಅವರು ಸಿ.ಟಿ ರವಿ ಅವರ ವೈದ್ಯಕ್ಯೀಯ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…