ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕಿಡಿ ಕಾಡಿರುವ ರಮೇಶ್ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಎಂದು ನಾನೆಂದೂ ಒಪ್ಪೋದಿಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ತಪ್ಪು ಮಾಡಿದವರಿಗೆ ಹಿರಿಯರು ಬೈದಿದ್ದಾರೆ. ಇಂತಿಂಥವರಜ ಇಂತಿಂಥ ಕೆಲಸ ಮಾಡಬೇಕು ಎಂದು ವರಿಷ್ಠರು ನಮಗೆ ಟಾಸ್ಕ್ ನೀಡಿದ್ದಾರೆ. ಟಾಸ್ಕ್ನಲ್ಲಿ ನಾನು ವಿಫಲವಾದರೆ ನನ್ನನ್ನು ಒದ್ದು ಹೊರಹಾಕಿ ಎಂದು ಹೇಳಿದ್ದೇನೆ. ಅಲ್ಲಿ ಏನೇನು ಚರ್ಚೆಯಾಯಿತು ಎಂದು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒಬ್ಬ ಭ್ರಷ್ಟ, ಪಕ್ಷದಲ್ಲಿ ಅವನಿನ್ನೂ ಜೂನಿಯರ್, ಅವನಿಗೆ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂದೇ ವಿಜಯೇಂದ್ರನಿಗೆ ಲೇಬಲ್ ಇದೆ. ಮುಂದಿನ ಅಧ್ಯಕ್ಷ ಯಾರೆಂದು ಪಕ್ಷ ತೀರ್ಮಾನ ಮಾಡಬೇಕು. ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೇನೂ ಯಡಿಯೂರಪ್ಪ ವಿರೋಧಿಯಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಅವರ ಬಗ್ಗೆ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಆಕ್ರೋಶ ಹೊರಹಾಕಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…