ರಾಜ್ಯ

ಬಿಜೆಪಿಯವರು ಬಟ್ಟೆ ಹರ್ಕೊಂಡು ಕೂಗಾಡಿದ್ರೂ ಐ…ಡೋಂಟ್‌ ಕೇರ್: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬಿಜೆಪಿಯವರು ಎಷ್ಟಾದರೂ ಕೂಗಾಡ್ಲಿ…. ಅರಚಾಡ್ಲಿ…. ಬಟ್ಟೆ ಹರ್ಕೊಳ್ಳಲಿ, ಐ ಡೋಂಟ್‌ ಕೇರ್‌ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಮಾತಾನಾಡಿದ ಅವರು, ಬಿಜೆಪಿಯವರು ಪದೇ ಪದೇ ದೂರು, ಮನವಿ ಇಟ್ಕೊಂಡು ರಾಜ್ಯಪಾಲರ ಬಳಿ ಹೋಗಿ ಕಟ್ಕೊಂಡು ನಿಲ್ತಾರೆ ಪಾಪ ಅನ್ಸುತ್ತೆ. ಇವರು ನಿಜವಾಗಲೂ ಅಕ್ರಮಗಳ ದೃಢಪಡಿಸುತ್ತಾರೆ ಎನ್ನುವುದಾದರೆ… ರಾಜ್ಯಪಾಲರ ಬಳಿ ಯಾಕೆ ಹೋಗ್ತಾರೆ? ಪ್ರಧಾನಿ ಹಾಗೂ ರಾಷ್ಟ್ರಪತಿಗಳ ಬಳಿ ಹೋಗಿ ದೂರು ಕೊಡ್ಲಿ… ಇವರು ಹೇಗೆ ಅಕ್ರಮಗಳನ್ನು ದೃಢಪಡಿಸುತ್ತಾರೆ ಎಂದು ನನಗೂ ಕೂತಹಲವಿದೆ ಎಂದು ಸವಾಲು ಹಾಕಿದರು.

ವಿಪಕ್ಷ ನಾಯಕ ಆರ್‌.ಅಶೋಕ್‌ ಲಾಜಿಕ್‌ ಪ್ರಕಾರ, ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಭಯೋತ್ಪಾಕರಾ? ಕೇಂದ್ರ ಸಚಿವ ವಿ.ಸೋಮಣ್ಣ ಅವರು ಟೆರರಿಸ್ಟಾ? ಬಾಯಿ ಇದೆ ಎಂದು ಸುಮ್ಮನೆ ಮಾತನಾಡಬಾರದು. ವಿರೋಧ ಪಕ್ಷದ ನಾಯಕರರಾಗಿ ಮಾತಿಗೆ ಒಂದು ತೂಕ ಇರಬೇಕು ಎಂದು ವಾಗ್ದಾಳಿ ನಡೆಸಿದರು.

ನಾವು ಭಯೋತ್ಪಾದಕರಿಂದ ಹೇಗೆ ಸಲಹೆ ಪಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರದ ಬಗ್ಗೆ ಬಲವಾದ ಮೂಲವಿದ್ದರೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಬಿಜೆಪಿಯ ನಾಯಕರು ದೂರು ನೀಡಲಿ. ಕೇಂದ್ರದಲ್ಲಿ 10 ವರ್ಷಗಳಿಂದ ಅವರದ್ದೇ ಸರ್ಕಾರವಿದೆ. ಅಲ್ಲಿ ಭಯೋತ್ಪಾದನೆ ನಿರ್ಮೂಲನೆಗೆ ಏನು ಮಾಡಿದ್ದಾರೆ? ಅಲ್ಲದೇ ಪಾಕಿಸ್ತಾನಿಗಳು ಬೆಂಗಳೂರಿಗೆ ಹೇಗೆ ಬರ್ತಾರೆ? ಹಾಗೂ ಇಸ್ಲಾಂ ಅಹಮದಾಬಾದ್‌ನಿಂದ ಏರ್‌ ಡ್ರಾಫ್ಟ್‌ ಆಗ್ತಿದ್ದಾರಾ? ಎಂದು ಪ್ರಶ್ನಿಸಿದರು.

ಬಿಜೆಪಿ ಶಾಸಕರು ಮತ್ತು ಸಚಿವರು, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ ಅವರಿಗೆ ಇವರೆಲ್ಲ ಭಾರತಕ್ಕೆ ಹೇಗೆ ಬಂದರೂ ಎಂದು ಕೇಳಬೇಕಾಗಿದೆ. ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಕೇಂದ್ರದಲ್ಲಿ ನಡೆಯುವ ಹಾಗು-ಹೋಗುಗಳ ಬಗ್ಗೆ ಬಿಜೆಪಿ ನಾಯಕರಿಗೆ ಅರಿವಿರಬೇಕು. ಅವರೇ ತಪ್ಪು ಮಾಡಿಕೊಂಡು ತಮ್ಮ ಸರ್ಕಾರದ ಮೇಲೆ ಆರೋಪ ಮಾಡಲು ಬರುತ್ತಾರೆ. ಮೊದಲು ಸರ್ಕಾರದ ಮೇಲೆ ಆರೋಪ ಮಾಡುತ್ತಿರುವುದಕ್ಕೆ ದಾಖಲೆ ನೀಡಿ. ಅದನ್ನು ಬಿಟ್ಟು ಸರ್ಕಾರಕ್ಕೆ ಪಾಠ ಹೇಳಿಕೊಡಲು ಬರಬಾರದು ಎಂದು ಕಿಡಿಕಾರಿದರು.

ಸರ್ಕಾರದ 60 ಪ್ರಕರಣಗಳಲ್ಲಿ ಸುಮಾರು 43 ಪ್ರಕರಣವನ್ನು ಕ್ಯಾಬಿನೆಟ್‌ ಉಪಸಮಿತಿಯ ನಿರ್ಧಾರದ ಮೇಲೆ ಹಿಂಪಡೆಯಲಾಗಿದೆ. ಈ ಎಲ್ಲಾ ಪ್ರಕರಣಗಳನ್ನು ಕೂಲಂಕುಷವಾಗಿ ಚರ್ಚೆ ಮಾಡಿದ ನಂತರ ತೀರ್ಮಾನ ಕೈಗೊಂಡು ಕೇಸ್‌ಗಳನ್ನು ವಾಪಾಸ್‌ ಪಡೆದಿದ್ದೇವೆ. ಅದರಲ್ಲಿ ಏನೂ ತಪ್ಪಿದೆ. ಈ ಕೇಸ್‌ಗಳಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಸಂಬಂಧಿಸಿದಂತೆ ನಾಲ್ಕೈದು ಕೇಸ್‌ಗಳನ್ನು ಹಿಂಪಡೆದಿದ್ದೇವೆ. ಅಲ್ಲದೇ, ಸಿ.ಟಿ.ರವಿ ಮತ್ತು ಸುಕುಮಾರ್‌ ಶೆಟ್ಟಿ ಹಾಗೂ ಮೈಸೂರು ಮಹಿಳಾ ಮೋರ್ಚಾ ಕೇಸ್‌ಗಳನ್ನು ಸಹ ವಾಪಾಸ್‌ ಪಡೆದುಕೊಂಡಿದ್ದೇವೆ. ಹೀಗಾಗಿ ಅವರೆಲ್ಲರೂ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರಿಗೆ ದೇಶದ್ರೋಹಿ ಅಥವಾ ಭಯೋತ್ಪಾದನೆ ನಡೆಸುವಂತೆ ಕಾಣುತ್ತಿರಬೇಕು. ರಾಜ್ಯದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮಾತನಾಡಲು ಯಾವುದೇ ವಿಚಾರ ಸಿಗುತ್ತಿಲ್ಲ. ಹಾಗಾಗಿ ಏನೂ ಲಾಜಿಕ್‌ ಇಲ್ಲದೇ ಸುಖಾ ಸುಮ್ಮನೆ ಹಿಟ್‌ ಅಂಡ್‌ ರನ್‌ ರೀತಿಯಲ್ಲಿ ಮಾತನಾಡುತ್ತಿರುತ್ತಾರೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

1 hour ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

1 hour ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago