ಧರ್ಮಸ್ಥಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿರುವ ಹೊಳೆ ನರಸೀಪುರ ಶಾಸಕ ಎಚ್.ಡಿ ರೇವಣ್ಣ ಇಂದು (ಸೋಮವಾರ, ಮೇ.27) ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಮಾರು ನಾಲ್ಕು ದಶಕಗಳಿಂದ ನಾನು ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ಹೊಳೆ ನರಸೀಪುರ ಶಾಸಕನಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ತಮ್ಮ ಹಾಗೂ ಪುತ್ರ ಪ್ರಜ್ವಲ್ ಮೇಲಿನ ಆರೋಪದ ಕುರಿತು ಮಾತನಾಡಲು ನಿರಾಕರಿಸಿದ ರೇವಣ್ಣ, ಈ ನೆಲದ ಕಾನೂನಿನ ಮೇಲೆ ನನಗೆ ಅಪಾರ ಗೌರವ, ವಿಶ್ವಾಸ ಮತ್ತು ನಂಬಿಕೆಯಿದೆ ಎಂದು ತಿಳಿಸಿದರು.
ಈ ಎಲ್ಲಾ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣ ಹಂತದಲ್ಲಿರುವುದರಿಂದ ಈ ಬಗ್ಗೆ ಕಾಮೆಂಟ್ ಮಾಡುವುದು ಸರಿಯಲ್ಲ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ ಎಂದರು.
ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೆಗೌಡರು ಭಾರತಕ್ಕೆ ಹಿಂತಿರುಗಿ ಕಾನೂನಿನ ಮುಂದೆ ಶರಣಾಗುವಂತೆ ಪತ್ರ ಬರೆದಿದ್ದಾರೆ ಈ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಯಾವುದೇ ಪ್ರತಿಕ್ರಿಯೆ ನೀಡದ ರೇವಣ್ಣ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ತೆರಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…