ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಅವರನ್ನು ನೇಮಕ ಮಾಡಿದ್ದು ಬಿಎಸ್ ಯಡಿಯೂರಪ್ಪ ಅಲ್ಲ. ಪಿಎಂ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶಿಫಾರಸಿನ ಮೇರೆಗೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ಪಕ್ಷದ ವರಿಷ್ಠರು ಮೊದಲ ಬಾರಿಗೆ ಶಾಸಕರಾದ ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಆಗಿ ಸ್ವೀಕರಿಸಿದ ರೀತಿಯಲ್ಲಿ ಕರ್ನಾಟಕದಲ್ಲಿಯೂ ಪಕ್ಷದ ನಾಯಕರು ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಬೆಂಬಲಿಸಬೇಕು. ಬಿ.ವೈ ವಿಜಯೇಂದ್ರ ಅವರ ನೇಮಕ ಬಗ್ಗೆ ಯಾವುದೇ ಟೀಕೆ ಮಾಡಬೇಡಿ, ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
ವಿಜಯೇಂದ್ರ ನೇಮಕದ ಬಗ್ಗೆ ಮತ್ತೊಬ್ಬ ಬಿಜೆಪಿ ನಾಯಕ ವಿ ಸೋಮಣ್ಣ ಕಿಡಿಕಾರಿದ್ದು, ಈ ವಿಷಯವನ್ನು ಪಕ್ಷದ ಹೈಕಮಾಂಡ್ ಬಗೆಹರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಮುಖಂಡರೊಂದಿಗೆ ಭೋಜನಕೂಟದಲ್ಲಿ ಪಾಲ್ಗೊಂಡಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡ ಪಾಟೀಲ್, ರಾಜೀನಾಮೆ ಕೊಟ್ಟು, ಪಕ್ಷಕ್ಕೆ ಮುಜುಗರ ಆಗುವುದನ್ನು ನಿಲ್ಲಸಿ ಎಂದು ಸಲಹೆ ನೀಡಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…