Mysore
21
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ನನಗೆ ಯಾರ ಪಾಠವು ಅಗತ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

dk shivkumar (4)

ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ ಡಿಕೆಶಿ ಅವರು, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ನಾನು ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದಿದ್ದೇನೆ. ಹೊಸದಾಗಿ ಕಾಂಗ್ರೆಸ್‌ ಸೇರಿಲ್ಲ. ನನಗೆ ಯಾರ ಪಾಠವೂ ಅಗತ್ಯವಿಲ್ಲ. ನಾನು ರಾಜಕಾರಣಕ್ಕೆ ಬರುವ ಮುನ್ನವೇ ಎಲ್ಲಾ ಪಕ್ಷಗಳನ್ನು ಕುರಿತು ಅಧ್ಯಯನ ಮಾಡಿದ್ದೇನೆ ಎಂದರು.

ನಾನು ಕಾಂಗ್ರೆಸ್‌ ಪಕ್ಷದಲ್ಲಿದ್ದೇನೆ. ಹಾಗೆಂದು ನನ್ನ ಧರ್ಮ ನಾನು ಬಿಡಲ್ಲ. ಮುಸ್ಲಿಂ, ಕ್ರಿಶ್ಚಿಯನ್‌ ಧರ್ಮಗಳ ಬಗ್ಗೆಯೂ ಗೌರವ ಇದೆ. ಆದರೆ ಇವೆಲ್ಲಕ್ಕಿಂತಲೂ ಮಾನವ ಧರ್ಮದ ಮೇಲೆ ನಾನು ಹೆಚ್ಚು ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದರು.

Tags:
error: Content is protected !!