ರಾಜ್ಯ

ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಕಾಂಗ್ರೆಸ್ಸಿಗ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ಮೊದಲು ಅವರ ಪಕ್ಷವನ್ನು ಅವರು ಸರಿ ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ನಾನು ಕಾಂಗ್ರೆಸ್‍ನ ವ್ಯಕ್ತಿ. ಪಕ್ಷ ನನ್ನ ಬಗ್ಗೆ ಕಾಳಜಿ ತೆಗೆದುಕೊಳ್ಳುತ್ತದೆ. ಸಂಕಷ್ಟದ ಸಮಯದಲ್ಲಿ ನನ್ನ ಜೊತೆಗೆ ಪಕ್ಷ ಇತ್ತು. ಈಗಲೂ ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನು ಓದಿ: 1ನೇ ತರಗತಿಯಿಂದಲೇ ಕಂಪ್ಯೂಟರ್‌ ಶಿಕ್ಷಣ ಆರಂಭ: ಸಚಿವ ಮಧು ಬಂಗಾರಪ್ಪ

ಇಂದು ಸಂವಿಧಾನದ ದಿನಾಚರಣೆ, ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ತಾವು ಮತ್ತೆ ದೆಹಲಿಗೆ ತೆರಳುತ್ತಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದೇನೆ ಎಂದರು.

ರಾಜ್ಯ ರಾಜಕೀಯದ ಊಹಾಪೋಹಗಳ ಬಗ್ಗೆ ಚರ್ಚೆ ಮಾಡಲು ನಾನು ಬಯಸುವುದಿಲ್ಲ. ಯಾವ ಶಾಸಕರ ಜೊತೆಗೂ ನಾನು ಮಾತನಾಡಿಲ್ಲ, ನನ್ನ ಪರವಾಗಿ ಮಾತನಾಡಿ ಎಂದು ಕೂಡ ಕೇಳಿಲ್ಲ. ನನಗೆ ಪಕ್ಷ ಮುಖ್ಯ. ನನಗಾಗಿ ನನ್ನ ಹೈಕಮಾಂಡ್ ಇದೆ. ಸೂಕ್ತ ಸಮಯದಲ್ಲಿ ಸಮರ್ಪಕ ನಿರ್ಧಾರ ತೆಗೆದುಕೊಳ್ಳುತ್ತದೆ. ಇಲ್ಲಿ ನಾನು ಮುಖ್ಯಮಂತ್ರಿಯಾಗುವುದು ಮುಖ್ಯ ಅಲ್ಲ. ಶಾಸಕರು ನನ್ನ ಪರವಾಗಿ ಮಾತನಾಡುವುದು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago