ರಾಜ್ಯ

ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಕಾಂಗ್ರೆಸ್ಸಿಗ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ಮೊದಲು ಅವರ ಪಕ್ಷವನ್ನು ಅವರು ಸರಿ ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ನಾನು ಕಾಂಗ್ರೆಸ್‍ನ ವ್ಯಕ್ತಿ. ಪಕ್ಷ ನನ್ನ ಬಗ್ಗೆ ಕಾಳಜಿ ತೆಗೆದುಕೊಳ್ಳುತ್ತದೆ. ಸಂಕಷ್ಟದ ಸಮಯದಲ್ಲಿ ನನ್ನ ಜೊತೆಗೆ ಪಕ್ಷ ಇತ್ತು. ಈಗಲೂ ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನು ಓದಿ: 1ನೇ ತರಗತಿಯಿಂದಲೇ ಕಂಪ್ಯೂಟರ್‌ ಶಿಕ್ಷಣ ಆರಂಭ: ಸಚಿವ ಮಧು ಬಂಗಾರಪ್ಪ

ಇಂದು ಸಂವಿಧಾನದ ದಿನಾಚರಣೆ, ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ತಾವು ಮತ್ತೆ ದೆಹಲಿಗೆ ತೆರಳುತ್ತಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದೇನೆ ಎಂದರು.

ರಾಜ್ಯ ರಾಜಕೀಯದ ಊಹಾಪೋಹಗಳ ಬಗ್ಗೆ ಚರ್ಚೆ ಮಾಡಲು ನಾನು ಬಯಸುವುದಿಲ್ಲ. ಯಾವ ಶಾಸಕರ ಜೊತೆಗೂ ನಾನು ಮಾತನಾಡಿಲ್ಲ, ನನ್ನ ಪರವಾಗಿ ಮಾತನಾಡಿ ಎಂದು ಕೂಡ ಕೇಳಿಲ್ಲ. ನನಗೆ ಪಕ್ಷ ಮುಖ್ಯ. ನನಗಾಗಿ ನನ್ನ ಹೈಕಮಾಂಡ್ ಇದೆ. ಸೂಕ್ತ ಸಮಯದಲ್ಲಿ ಸಮರ್ಪಕ ನಿರ್ಧಾರ ತೆಗೆದುಕೊಳ್ಳುತ್ತದೆ. ಇಲ್ಲಿ ನಾನು ಮುಖ್ಯಮಂತ್ರಿಯಾಗುವುದು ಮುಖ್ಯ ಅಲ್ಲ. ಶಾಸಕರು ನನ್ನ ಪರವಾಗಿ ಮಾತನಾಡುವುದು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

18 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

51 mins ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

5 hours ago