ರಾಜ್ಯ

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಬೇಡವೇ ಬೇಡ ಎಂದು ಖಡಕ್‌ ಆಗಿ ಹೇಳಿದ್ದಾರೆ.

ಡಿಕೆಶಿ ಸಂಪುಟದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ. ಬೇರೆಯವರಿಗೆ ಅವಕಾಶ ಕೊಡಲಿ. ನನಗೆ ಯಾವ ಸ್ಥಾನವೂ ಬೇಕಾಗಿಲ್ಲ. ಹಾಗಂತ ಡಿಕೆಶಿ ಸಿಎಂ ಆಗುತ್ತಾರೆ ಎಂದು ಹೇಳುತ್ತಿಲ್ಲ. ಅದೇನು ಅವರು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಎಂದು ಪ್ರಶ್ನೆ ಮಾಡಿದರು. ನನಗೆ ಅಧಿಕಾರ ದಾಹ ಇಲ್ಲ. ಶಿವಕುಮಾರ್‌ ಸಿಎಂ ಆದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ. ನನ್ನ ಹೇಳಿಕೆಗೆ ನಾನು ಬದ್ಧ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

19 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

19 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

19 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

19 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

19 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

22 hours ago