ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ಮಾ.26ರಂದು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ದಿಢೀರನೇ ಚಿನ್ನಸ್ವಾಮಿ ಸ್ಟೇಡಿಯಂನ ಐಪಿಎಲ್ ಪಂದ್ಯ ಶಾಸಕರಿಗೆ ಟಿಕೆಟ್ ಹಂಚಿಕೆ ಹಾಗೂ ಶಾಸಕರ ಮರ್ಯಾದೆಯ ಕುರಿತು ಚರ್ಚೆಗಳು ಪ್ರಾರಂಭವಾದದ್ದು ತಮಗೆ ತಿಳಿದೇ ಇದೆ.
ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಟರನ್ನಾಗಿಸುತ್ತದೆ.
ಈ ಹಿನ್ನೆಲೆಯಲ್ಲಿ ಹಾಗೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಸರ್ಕಾರ ಅಥವಾ ಕೆಎಸ್ಸಿಎ ವತಿಯಿಂದ ಶಾಸಕರಿಗೆ ನೀಡಲಾಗುವ ಐಪಿಎಲ್ ಪಂದ್ಯದ ಯಾವುದೇ ಪಾಸ್ ಅಥವಾ ಟಿಕೆಟ್ಗಳನ್ನು ನಾನು ಸವಿನಯವಾಗಿ ನಿರಾಕರಿಸಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…