ಹಾಸನ : ಸುಪ್ರಸಿದ್ಧ ಹಾಸನಾಂಬೆಯ ದೇಗುಲಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬಸ್ಥರೋಂದಿಗೆ ದೇವಿಯ ದರ್ಶನ ಪಡೆದಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನಾಂಬೆಯ ದರ್ಶನಕ್ಕೆ ಪ್ರತಿ ವರ್ಷ ಕುಟುಂಬ ಸಮೇತ ಬರ್ತೀವಿ ಎಂದು ಹೇಳಿದ್ದಾರೆ.
ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾಳೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರೂ ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದರು.
ದೇಗುಲದಲ್ಲಿ ವಿದ್ಯುತ್ ದೀಪಾಲಂಕಾರ ಸೊಗಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಎಲ್ಲರ ಸಹಕಾರದಿಂದ ಉತ್ತಮವಾಗಿ ಆಯೋಜನೆ ಮಾಡಿದ್ದಾರೆ. ಆರೋಗ್ಯ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ. ಮುಂದಿನ ಬಾರಿ ಆ ತಾಯಿ ದರ್ಶನಕ್ಕೆ ನಡೆದುಕೊಂಡು ಬರುವಷ್ಟು ಶಕ್ತಿ ನೀಡಲಿ. ಈ ಕ್ಷೇತ್ರದ ಉಸ್ತುವಾರಿ ಸಚಿವರು ರಾಜಣ್ಣ ಅಧಿಕಾರಿಗಳಿಂದ ಈ ಕಾರ್ಯಕ್ರಮ ಮಾಡಿಸಿದ್ದಾರೆ ಮುಂದಿನ ಬಾರಿ ಆರೋಗ್ಯವಾಗಿದ್ದರೆ ದರ್ಶನಕ್ಕೆ ಅವಕಾಶ ಮಾಡಿಕೊಡು ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ಹಾಸನ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಗೌರವ ಅರ್ಪಣೆ ಮಾಡಲಾಯಿತು,ಜಿಲ್ಲಾ ಆಡಳಿತದ ಕಾರ್ಯಕ್ಕೆ ದೇವೇಗೌಡ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…