ಹಾಸನ : ಸುಪ್ರಸಿದ್ಧ ಹಾಸನಾಂಬೆಯ ದೇಗುಲಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬಸ್ಥರೋಂದಿಗೆ ದೇವಿಯ ದರ್ಶನ ಪಡೆದಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನಾಂಬೆಯ ದರ್ಶನಕ್ಕೆ ಪ್ರತಿ ವರ್ಷ ಕುಟುಂಬ ಸಮೇತ ಬರ್ತೀವಿ ಎಂದು ಹೇಳಿದ್ದಾರೆ.
ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾಳೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರೂ ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದರು.
ದೇಗುಲದಲ್ಲಿ ವಿದ್ಯುತ್ ದೀಪಾಲಂಕಾರ ಸೊಗಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಎಲ್ಲರ ಸಹಕಾರದಿಂದ ಉತ್ತಮವಾಗಿ ಆಯೋಜನೆ ಮಾಡಿದ್ದಾರೆ. ಆರೋಗ್ಯ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ. ಮುಂದಿನ ಬಾರಿ ಆ ತಾಯಿ ದರ್ಶನಕ್ಕೆ ನಡೆದುಕೊಂಡು ಬರುವಷ್ಟು ಶಕ್ತಿ ನೀಡಲಿ. ಈ ಕ್ಷೇತ್ರದ ಉಸ್ತುವಾರಿ ಸಚಿವರು ರಾಜಣ್ಣ ಅಧಿಕಾರಿಗಳಿಂದ ಈ ಕಾರ್ಯಕ್ರಮ ಮಾಡಿಸಿದ್ದಾರೆ ಮುಂದಿನ ಬಾರಿ ಆರೋಗ್ಯವಾಗಿದ್ದರೆ ದರ್ಶನಕ್ಕೆ ಅವಕಾಶ ಮಾಡಿಕೊಡು ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ಹಾಸನ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಗೌರವ ಅರ್ಪಣೆ ಮಾಡಲಾಯಿತು,ಜಿಲ್ಲಾ ಆಡಳಿತದ ಕಾರ್ಯಕ್ಕೆ ದೇವೇಗೌಡ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…