ಹಾಸನ : ಸುಪ್ರಸಿದ್ಧ ಹಾಸನಾಂಬೆಯ ದೇಗುಲಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬಸ್ಥರೋಂದಿಗೆ ದೇವಿಯ ದರ್ಶನ ಪಡೆದಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನಾಂಬೆಯ ದರ್ಶನಕ್ಕೆ ಪ್ರತಿ ವರ್ಷ ಕುಟುಂಬ ಸಮೇತ ಬರ್ತೀವಿ ಎಂದು ಹೇಳಿದ್ದಾರೆ.
ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾಳೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರೂ ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದರು.
ದೇಗುಲದಲ್ಲಿ ವಿದ್ಯುತ್ ದೀಪಾಲಂಕಾರ ಸೊಗಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಎಲ್ಲರ ಸಹಕಾರದಿಂದ ಉತ್ತಮವಾಗಿ ಆಯೋಜನೆ ಮಾಡಿದ್ದಾರೆ. ಆರೋಗ್ಯ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ. ಮುಂದಿನ ಬಾರಿ ಆ ತಾಯಿ ದರ್ಶನಕ್ಕೆ ನಡೆದುಕೊಂಡು ಬರುವಷ್ಟು ಶಕ್ತಿ ನೀಡಲಿ. ಈ ಕ್ಷೇತ್ರದ ಉಸ್ತುವಾರಿ ಸಚಿವರು ರಾಜಣ್ಣ ಅಧಿಕಾರಿಗಳಿಂದ ಈ ಕಾರ್ಯಕ್ರಮ ಮಾಡಿಸಿದ್ದಾರೆ ಮುಂದಿನ ಬಾರಿ ಆರೋಗ್ಯವಾಗಿದ್ದರೆ ದರ್ಶನಕ್ಕೆ ಅವಕಾಶ ಮಾಡಿಕೊಡು ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ಹಾಸನ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಗೌರವ ಅರ್ಪಣೆ ಮಾಡಲಾಯಿತು,ಜಿಲ್ಲಾ ಆಡಳಿತದ ಕಾರ್ಯಕ್ಕೆ ದೇವೇಗೌಡ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…