ರಾಜ್ಯ

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೇವಲ ದಲಿತರಿಗೆ ಮಾತ್ರವಲ್ಲದೇ, ಇಡೀ ಜಗತ್ತಿನ ನಾಯಕರಾಗಿದ್ದರು. ಭಾರತಕ್ಕೆ ಅತ್ಯಂತ ಯೋಗ್ಯವಾದ ಸಂವಿಧಾನ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. 1950 ಜನವರಿ 26 ರಂದು ಭಾರತದ ಸಂವಿಧಾನ ಜಾರಿಗೆ ಬರಲಿದ್ದು, ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡಲಿದ್ದೇವೆ. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಲಭಿಸಿದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಫಲಿಸುತ್ತದೆ ಎಂದಿದ್ದರು. ಒಬ್ಬ ವ್ಯಕ್ತಿ , ಒಂದು ವೋಟು, ಒಂದು ಮೌಲ್ಯ ಎಂದು ಸಂವಿಧಾನ ತಿಳಿಸಿದ್ದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವಗಳ ಮೇಲೆ ಸಂವಿಧಾನ ನಿಂತಿದೆ. ಸಂವಿಧಾನ ಜಾರಿಯಾಗಿ 76 ವರ್ಷಗಳು ಕಳೆದರೂ ಸಮಾಜದಲ್ಲಿನ ಅಸಮಾನತೆ ಹೋಗಿಲ್ಲ ಎಂದರು.

ಅಂದು ಆರ್ ಎಸ್ ಎಸ್ ನ ಮುಖವಾಣಿಯಾಗಿದ್ದ ಆರ್ಗನೈಸರ್ ಪತ್ರಿಕೆಯಲ್ಲಿ ಸಂವಿಧಾನವನ್ನು ವಿರೋಧಿಸಿದ್ದರು. ಆದರೆ ಈಗ ಆರ್ ಎಸ್ ಎಸ್ –ಬಿಜೆಪಿಯವರು ಅಂಬೇಡ್ಕರ್ ಅವರನ್ನು ಹೊಗಳುತ್ತಿದ್ದಾರೆ. ಅವರ ಸೋಲಿಗೆ ಕಮ್ಯುನಿಷ್ಟ್ ಪಕ್ಷದ ಎಸ್.ಎ.ಡಾಂಗೆ ಮತ್ತು ಹಿಂದುತ್ವ ನಾಯಕ ವಿ.ಡಿ.ಸಾರ್ವರ್ಕರ್ ರವರು ಕಾರಣರಾಗಿದ್ದರು ಎಂದು ಅಂಬೇಡ್ಕರ್ ರವರು ಬರೆದುಕೊಂಡಿದ್ದಾರೆ. ಆದರೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಾರೆ. ಬಿಜೆಪಿಯವರು ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಾಗಲೀ ಅಥವಾ ಸಂವಿಧಾನದ ಪರವಾಗಿರಲಿಲ್ಲ. ಆರ್ ಎಸ್ ಎಸ್ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಆರ್ ಎಸ್ ಎಸ್ ಹೆಡ್ಗೆವಾರ್ ಅವರು ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ ಎಂದರು.

ಭಾರತದ ಅಭಿವೃದ್ಧಿಯಲ್ಲಿ ಆರ್ ಎಸ್ ಎಸ್, ಬಿಜೆಪಿಯ ಕೊಡುಗೆಯಿಲ್ಲ. ದೇಶಕ್ಕೆ ಸ್ವಾತಂತ್ರ್ಯದ ಲಭಿಸುವ ಮುಂಚಿತವಾಗಿ ಮನುಸ್ಮೃತಿ ಜಾರಿಯಲ್ಲಿತ್ತು. ಚತುವರ್ಣ ವ್ಯವಸ್ಥೆಯನ್ನು ಹೋಗಲಾಡಿಸಲು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೋರಾಡಿದರು. ಹಿಂದೂಧರ್ಮದಲ್ಲಿದ್ದಂತಹ ಅಸ್ಪೃಶ್ಯತೆಗಳನ್ನು ಸುಧಾರಿಸಲು ಬಹಳ ಪ್ರಯತ್ನಿಸಿ, ಮನುಶಾಸ್ತ್ರವನ್ನು ಸುಟ್ಟರು. ಅವರು ಬಾಲ್ಯದಿಂದಲೇ ಅಸ್ಪೃಶ್ಯತೆಯ ಕರಾಳ ಅನುಭವ ಹೊಂದಿದ್ದ ಕಾರಣ, ದೀನ ದಲಿತರಿಗೆ ಸಮಾನ ಅವಕಾಶಗಳನ್ನು ಆಗುಮಾಡಿಸಲು ಪ್ರಯತ್ನಿಸಿದರು. ಎಲ್ಲ ಶೋಷಿತ ವರ್ಗದವರಿಗೂ ಸಮಾನ ಶಿಕ್ಷಣದ ಹಕ್ಕನ್ನು ಸಂವಿಧಾನ ನೀಡಿತು. ಸಂವಿಧಾನದ ಶಕ್ತಿಯಿಂದಲೇ ತಾನು ಇಂದು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

12 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

15 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

19 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

22 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

22 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

22 hours ago