ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.
ಈಗ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ ಕಟ್ಟಡ ನಿರ್ಮಾಣ ಆಗಲಿದೆ ಎಂದರು.
ಇದನ್ನು ಓದಿ: ಎಸ್ಟಿಗೆ ಕುರುಬ ಸಮುದಾಯ : ಸರ್ಕಾರಕ್ಕೆ ವರದಿ ಸಲ್ಲಿಸಿದ ಬುಡಕಟ್ಟು ಸಂಶೋಧನಾ ಸಂಸ್ಥೆ
ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ರಾಜಕೀಯಕ್ಕೆ ಬಂದೆ.
ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.
ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…