ರಾಜ್ಯ

ನಾನು ಮೊದಲಿಂದಲೂ ಸನಾತನವಾದಿ RSS ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ಈಗ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದರು.

ಇದನ್ನು ಓದಿ: ಎಸ್‌ಟಿಗೆ ಕುರುಬ ಸಮುದಾಯ : ಸರ್ಕಾರಕ್ಕೆ ವರದಿ ಸಲ್ಲಿಸಿದ ಬುಡಕಟ್ಟು ಸಂಶೋಧನಾ ಸಂಸ್ಥೆ

ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ರಾಜಕೀಯಕ್ಕೆ ಬಂದೆ.

ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು‌.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

11 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

12 hours ago