ರಾಜ್ಯ

ನಾನು ಮೊದಲಿಂದಲೂ ಸನಾತನವಾದಿ RSS ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ಈಗ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದರು.

ಇದನ್ನು ಓದಿ: ಎಸ್‌ಟಿಗೆ ಕುರುಬ ಸಮುದಾಯ : ಸರ್ಕಾರಕ್ಕೆ ವರದಿ ಸಲ್ಲಿಸಿದ ಬುಡಕಟ್ಟು ಸಂಶೋಧನಾ ಸಂಸ್ಥೆ

ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ರಾಜಕೀಯಕ್ಕೆ ಬಂದೆ.

ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು‌.

ಆಂದೋಲನ ಡೆಸ್ಕ್

Recent Posts

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

6 mins ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

19 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

24 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

55 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago