ರಾಜ್ಯ

ನಾನು ಮೊದಲಿಂದಲೂ ಸನಾತನವಾದಿ RSS ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ಈಗ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದರು.

ಇದನ್ನು ಓದಿ: ಎಸ್‌ಟಿಗೆ ಕುರುಬ ಸಮುದಾಯ : ಸರ್ಕಾರಕ್ಕೆ ವರದಿ ಸಲ್ಲಿಸಿದ ಬುಡಕಟ್ಟು ಸಂಶೋಧನಾ ಸಂಸ್ಥೆ

ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ರಾಜಕೀಯಕ್ಕೆ ಬಂದೆ.

ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು‌.

ಆಂದೋಲನ ಡೆಸ್ಕ್

Recent Posts

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

1 hour ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

3 hours ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

6 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

6 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

22 hours ago