ರಾಜ್ಯ

ಮುಡಾ ಹಗರಣದಲ್ಲಿ ನನ್ನ ಪಾತ್ರ ಏನೂ ಇಲ್ಲ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ನನ್ನ ಪಾತ್ರ ಸೊನ್ನೆ. ನಾನು ಬಹಳ ಕ್ಲಿಯರ್‌ ಆಗಿದ್ದೇನೆ. ಈ ಹಗರಣದಲ್ಲಿ ನನ್ನದಾಗಲಿ, ಸಿಎಂ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ.

ಇಡಿ ನೋಟಿಸ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರು, ಮುಡಾ ಹಗರಣದಲ್ಲಿ ಯಾವುದೇ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್‌ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು, ಫೆಬ್ರವರಿ.10ರ ನಂತರ ನೋಡೋಣ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಹಾಗೂ ಕಾಂಗ್ರೆಸ್‌ ಪಕ್ಷ ನ್ಯಾಯಾಂಗ ಹಾಗೂ ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಯಾಕೆ ನೋಟಿಸ್‌ ನೀಡಿದ್ದಾರೆ ಎಂಬುದನ್ನು ಇಡಿ ಮತ್ತು ಸಿಬಿಐ ಅವರನ್ನೇ ಕೇಳಬೇಕು ಎಂದು ಹೇಳಿದರು.

ನನಗೆ ನೋಟಿಸ್‌ ಬಂದಾಗ ಆಶ್ಚರ್ಯ ಆಯಿತು. ಹಗರಣ ನಡೆದಾಗ ನಾನು ಮಂತ್ರಿ ಆಗಿರಲಿಲ್ಲ. ಸೈಟನ್ನೂ ಪಡೆದಿಲ್ಲ. ನನಗೆ ಕೊಟ್ಟಿರುವುದು ಒಂದೇ ನೋಟಿಸ್‌. ಸಿಎಂ ಪತ್ನಿಗೆ ಎರಡನೇ ನೋಟಿಸ್‌ ಕೊಟ್ಟಿದ್ದಾರಾ ಎಂದು ನನಗೆ ಗೊತ್ತಿಲ್ಲ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

1 hour ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

1 hour ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

2 hours ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

2 hours ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

3 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

3 hours ago