ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ನನ್ನ ಪಾತ್ರ ಸೊನ್ನೆ. ನಾನು ಬಹಳ ಕ್ಲಿಯರ್ ಆಗಿದ್ದೇನೆ. ಈ ಹಗರಣದಲ್ಲಿ ನನ್ನದಾಗಲಿ, ಸಿಎಂ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ಇಡಿ ನೋಟಿಸ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು, ಮುಡಾ ಹಗರಣದಲ್ಲಿ ಯಾವುದೇ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು, ಫೆಬ್ರವರಿ.10ರ ನಂತರ ನೋಡೋಣ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಹಾಗೂ ಕಾಂಗ್ರೆಸ್ ಪಕ್ಷ ನ್ಯಾಯಾಂಗ ಹಾಗೂ ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಯಾಕೆ ನೋಟಿಸ್ ನೀಡಿದ್ದಾರೆ ಎಂಬುದನ್ನು ಇಡಿ ಮತ್ತು ಸಿಬಿಐ ಅವರನ್ನೇ ಕೇಳಬೇಕು ಎಂದು ಹೇಳಿದರು.
ನನಗೆ ನೋಟಿಸ್ ಬಂದಾಗ ಆಶ್ಚರ್ಯ ಆಯಿತು. ಹಗರಣ ನಡೆದಾಗ ನಾನು ಮಂತ್ರಿ ಆಗಿರಲಿಲ್ಲ. ಸೈಟನ್ನೂ ಪಡೆದಿಲ್ಲ. ನನಗೆ ಕೊಟ್ಟಿರುವುದು ಒಂದೇ ನೋಟಿಸ್. ಸಿಎಂ ಪತ್ನಿಗೆ ಎರಡನೇ ನೋಟಿಸ್ ಕೊಟ್ಟಿದ್ದಾರಾ ಎಂದು ನನಗೆ ಗೊತ್ತಿಲ್ಲ ಎಂದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…