ರಾಜ್ಯ

ನಾನು ಕಾಂಗ್ರೆಸ್‌ ಸೇರಲು ಅರ್ಜಿ ಹಾಕಿಲ್ಲ : ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ : ನಾನೇನೂ ಕಾಂಗ್ರೆಸ್‌ ಸೇರಲು ಅರ್ಜಿ ಹಾಕಿಲ್ಲ. ತಾಲೂಕಿನಲ್ಲಿ ಬರವಿದೆ, ಎಷ್ಟು ಬಾರಿ ಪ್ರವಾಸ ನಡೆಸಿದ್ದೀರಾ? ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೀರಾ? ಎಂದು ಹೊನ್ನಾಳಿ ಶಾಸಕ ಶಾಂತನಗೌಡರಿಗೆ ಮಾಜಿ ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಸಿಎಂ ಭೇಟಿ ಮಾಡಲು ನಿಮ್ಮ ಅಪ್ಪಣೆ ಬೇಕಿಲ್ಲ, ಶಾಸಕರಾಗಿ ಇದುವರೆಗೂ ನೀವು ತಂದಿರುವುದು 50 ಲಕ್ಷ ರೂಪಾಯಿ ಅನುದಾನ ಮಾತ್ರ. ಈಗ ನಡೆಯುತ್ತಿರೋದು ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವಧಿಯಲ್ಲಿ ಮಂಜೂರು ಮಾಡಿದ ಕಾಮಗಾರಿಗಳು ಎಂದರು.

ನಾನು ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ಅನುದಾನ ತಂದಿದ್ದೆ. ನೀವು ಎಷ್ಟು ತಂದಿದ್ದೀರಿ? ಶಾಸಕರಾಗಿ 6 ತಿಂಗಳು ಕಳೆದಿದೆ. ಎಷ್ಟು ಅನುದಾನ ತಂದಿದ್ದೀರಿ ಎಂದು ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಸೇರುತ್ತೇನೆ ಎಂದು ಅರ್ಜಿ ಹಿಡಿದುಕೊಂಡು ನಿಮ್ಮ ಮನೆಬಾಗಿಲಿಗೆ ಬಂದಿಲ್ಲ. ನಾನು ಅಭಿವೃದ್ಧಿ ಮತ್ತು ಬರಗಾಲದ ವಿಚಾರದಲ್ಲಿ ರಾಜಕಾರಣ ಮಾಡಲ್ಲ ಎಂದು ಹೇಳಿದ್ದಾರೆ.

ನಾನು ಮೂರು ಬಾರಿ ಶಾಸಕನಾಗಿ ಗೆದ್ದು, ಸಚಿವನಾಗಿ ಆಡಳಿತ ನಡೆಸಿದ ಅನುಭವವಿದೆ. ಯಡಿಯೂರಪ್ಪನವರು ನಬಾರ್ಡ್ ಯೋಜನೆಯಡಿ 510 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಪದೇ ಪದೇ ಹಗುರವಾಗಿ ಟೀಕೆ ಮಾಡಿದರೆ ಅದೇ ಧಾಟಿಯಲ್ಲಿ ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

lokesh

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

57 mins ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

1 hour ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

2 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

3 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

3 hours ago