ರಾಜ್ಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆಯನ್ನು ನಾನು ಕೇಳಿಲ್ಲ, ನನ್ನನ್ನು ಅರೆಸ್ಟ್‌ ಮಾಡಲಿ: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಕ್ಕಾಗಿ ರಾಜೀನಾಮೆ ಕೇಳಿದ್ದೇನೆ ಹೊರತು, ಎಫ್‌ಐಆರ್‌ ದಾಖಲಾದ ಕಾರಣವಾಗಿ ರಾಜೀನಾಮೆ ಕೇಳಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್‌ ಮಾಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿರುವುದಕ್ಕೆ ರಾಜೀನಾಮೆ ಕೇಳಿಲ್ಲ. ಅಧಿಕಾರಿಗಳ ಮೂಲಕ ಸಾಕ್ಷಿಗಳನ್ನು ಪರಿಪೂರ್ಣವಾಗಿ ನಾಶ ಮಾಡುವ ವಾತಾವರಣ ನಿರ್ಮಿಸಿಕೊಂಡಿದ್ದಾರೆ. ಈ ಸಲುವಾಗಿ ರಾಜೀನಾಮೆ ನೀಡಿ ಎಂದು ಕೇಳಿದ್ದೇನೆ ಅಷ್ಟೇ. ಎಫ್‌ಐಆರ್‌ ನನ್ನ ವಿರುದ್ಧವೂ ಇದೆ. ನಾನೂ ಏನಾದರೂ ಹಣ ತೆಗೆದುಕೊಂಡಿದ್ದೇನಾ ಅಥವಾ ಸರ್ಕಾರದಿಂದ ಅನುಕೂಲ ಮಾಡಿಕೊಂಡಿದ್ದೇನಾ? ನಾನು ರಾಜ್ಯದ ಅಭಿವೃದ್ಧಿಗಾಗಿ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಂಡಿದ್ದೇನೆ ಅಷ್ಟೇ ಎಂದು ಹೇಳಿದರು.

ಸಿದ್ದರಾಮಯ್ಯ ಅವರಿಗೆ ಮಾವಿನಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಇದನ್ನು ಇಟ್ಟುಕೊಂಡು ರಕ್ಷಣೆ ಪಡೆದುಕೊಳ್ಳುವುದು ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತರಲ್ಲ. ನನ್ನ ವಿರುದ್ಧದ ದೂರು ವಾಸ್ತವಾಂಶಕ್ಕೆ ಹತ್ತಿರವಾಗಿದೆ ಎಂದು ಹೇಳುತ್ತಾರ? ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಭಾಷಣದ ಸಮಯದಲ್ಲಿ ಸುಳ್ಳು ವರದಿಗಳಿಗೆ ಪ್ರಾಮುಖ್ಯತೆ ನೀಡಬಾರದು ಎಂದು ಹೇಳಿದ್ದಾರೆ. ಹಾಗಾಗಿ ಏನಾದರೂ ಹುಡುಕುವುದಾದರೆ ಕಷ್ಟವಾಗಿರುವುದನ್ನು ಹುಡುಕಿ. ಇಲ್ಲವಾದರೆ ಎಫ್‌ಐಆರ್‌ ಮಾಡಲು ಯಾರ ಯಾರ ಮೇಲೆ ಒತ್ತಡ ಹೇರಿದ್ದರೂ ಎಂಬು ತಿಳಿದಿದೆ. ಈ ಷಡ್ಯಂತ್ರದಿಂದ ನನ್ನನ್ನು ಏನೂ ಮಾಡಲು ಸಾಧ್ಯವಾಗುವುದಿಲ್ಲ. ನಾನು ರಾಜೀನಾಮೆ ನೀಡಿ ಎಂದು ಸಿದ್ದರಾಮಯ್ಯ ಹತ್ತಿರ ಕೇಳಿಲ್ಲ. ಅವರು ನಡೆದುಕೊಳ್ಳುತ್ತಿರುವ ಬಗೆಗೆ ಕೇಳಿದ್ದೇನೆ ಅಷ್ಟೇ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

8 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

8 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

8 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

8 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

8 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

9 hours ago