ರಾಜ್ಯ

ನಾನು ಲೋಕಸಭಾ ಟಿಕೆಟ್‌ ಕೇಳಿಲ್ಲ : ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು:  ಈ ಬಾರಿಯ ಲೋಕಸಭಾ ಚುನಾವಣೆಗೆ ನಾನು ಟಿಕೆಟ್‌ ಕೇಳಿದ್ದೇನೆ ಎಂಬ ಊಹಾಪೋಹ ಹರಿದಾಡುತ್ತಿದೆ. ನಾನಂತು ಟಿಕೆಟ್‌ ಕೇಳಿಲ್ಲ. ಪಕ್ಷ ತೀರ್ಮಾನಿಸಿದರೆ ಅದಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ನಾನಾಗೆ ಟಿಕೆಟ್‌ ಕೇಳಿಲ್ಲ. ಒಂದು ವೇಳೆ ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಗೋಷಣೆ ಮಾಡಿದರೆ ಅದಕ್ಕೆ ಬದ್ಧನಾಗಿದ್ದೇನೆ. ಇಲ್ಲವಾದರೆ ಪಕ್ಷ ಯಾರನ್ನು ಅಭ್ಯರ್ಥಿ ಮಾಡುತ್ತದೊ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಕೆಲಸ ಮಾಡುವುದು ನಮ್ಮ ಜವಬ್ಧಾರಿ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟನೆ ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದರು.

ಇಂದಿಗೂ ನನ್ನ ಮಾತಿಗೆ ಬದ್ಧ: ಭಾರತ ಹಿಂದು ರಾಷ್ಟ್ರವಾದರೆ ದೇಶಕ್ಕೆ ಉಳಿಗಾಲವಿಲ್ಲ ಎಂಬ ನನ್ನ ಹೇಳಿಕೆಗೆ ಇಂದಿಗೂಬದ್ಧನಾಗಿದ್ದೇನೆ. ನಾನು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಸರ್ಕಾರ ಧರ್ಮದ ಕೆಲಸ ಮಾಡುವುದಲ್ಲ. ಸರ್ಕಾರ ಮಾಡಬೇಕಾಗಿರುವುದು ಅಭಿವೃದ್ಧಿ ಕೆಲಸ. ಬಿಜೆಪಿ ಅಭಿವೃದ್ಧಿಯನ್ನೇ ಮಾಡದೆ ಕೇವಲ ಧರ್ಮದ ಕೆಲಸ ಮಾಡುತ್ತಿದೆ. ಧರ್ಮದ ವಿಚಾರದಲ್ಲಿ ಕೆಲಸ ಮಾಡುವುದಕ್ಕೆ ಬೇರೆ ವ್ಯವಸ್ಥೆ ಇದೆ.

 

ಟಾರ್ಗೆಟ್‌ ಮಾಡಲು ಪ್ರತಾಪ್‌ ಸಿಂಹ ನ್ಯಾಷನಲ್‌ ಲೀಡರಾ?
ನನ್ನ ತಂದೆ ಯಾವತ್ತೂ ಟಾರ್ಗೆಟ್‌ ರಾಜಕಾರಣ ಮಾಡಿಲ್ಲ. ಅಷ್ಟಾಗಿಯೂ ಟಾರ್ಗೆಟ್‌ ಮಾಡಲು ಪ್ರತಾಪ್‌ ಸಿಂಹ ಏನು ನ್ಯಾಷನಲ್‌ ಲೀಡರಾ? ಪ್ರತಾಪ್‌ ಸಿಂಹ ತಾವು ನ್ಯಾಷನಲ್‌ ಲೀಡರ್‌ ಎಂಬ ಭ್ರಮೆಯಲಿದ್ದಾರೆ. ಪ್ರತಾಸಿಂಹ ಅವರ ತಮ್ಮ ತಪ್ಪು ಮಾಡಿದ್ದಾರೆ ಹೀಗಾಗಿ ಬಂಧಿಸಿದ್ದಾರೆ. ತಮ್ಮನ ತಪ್ಪು ಮುಚ್ಚಿಕೊಳ್ಳಲು ಸಂಸದರು ಹೀಗೆಲ್ಲಾ ಮಾತನಾಡುತ್ತಿದ್ದಾರೆ.

 

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

2 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

2 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

4 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

4 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

6 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

8 hours ago