ರಾಜ್ಯ

ಜೇನಿನ ಜೈಲಿನ ಬಲೆಯ ಅನುಭವ ನನಗೆ ಆಗಿಲ್ಲ ; ಸಚಿವ ಸುಧಾಕರ್‌

ಚಿಕ್ಕಬಳ್ಳಾಪುರ : ಜೇನಿನ ಜೈಲಿನ ಬಲೆಯ ಅನುಭವ ನನಗೆ ಆಗಿಲ್ಲ. ಆದರೆ ನನ್ನ ಹೆಸರಿನವರಿಗೆ ಆಗಿದೆ ಎಂಬ ವದಂತಿಗಳಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನನಗೆ ಹನಿಟ್ರ್ಯಾಪ್‍ನ ಯಾವುದೇ ಅನುಭವವಾಗಿಲ್ಲ ಎಂದರು.

ಹನಿಟ್ರ್ಯಾಪ್ ಎಂಬುದು ಸಾರ್ವಜನಿಕರ ಜೀವನದಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ರಾಜಕೀಯದಲ್ಲೂ ಇದೆ. ಸಣ್ಣಪುಟ್ಟ ವ್ಯಾಪಾರ ಮಾಡುವವರು ಇದಕ್ಕೆ ಸಿಲುಕಿ, ಮರ್ಯಾದೆಗೆ ಅಂಜಿ ಆತಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ಬೆಳಕಿಗೆ ಬಂದಿವೆ, ಇನ್ನೂ ಕೆಲವು ಮುಚ್ಚಿ ಹೋಗಿವೆ.

ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಕೆಲವರು ಹೈಕೋರ್ಟ್‍ಗೆ ಹೋಗಿ ನಿರ್ಬಂಧಕ ಆಜ್ಞೆ ತಂದಿದ್ದರು. ಆಗೆಲ್ಲಾ ಅವರು ಸಿಬಿಐ ತನಿಖೆಗೆ ಒಪ್ಪಿಸುತ್ತಿರಲಿಲ್ಲ. ವಿಧಾನಸಭೆಯಲ್ಲಿ ಪ್ರಸ್ತಾಪವಾದಾಗ ನಮ್ಮ ಸಚಿವರು ತನಿಖೆ ಮಾಡಿಸುವ ಭರವಸೆ ನೀಡಿದ್ದರು. ಆದರೆ ಬಿಜೆಪಿಯವರು ಮುಖ್ಯಮಂತ್ರಿಯವರ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಎಷ್ಟು ಸಾಲ ಮಾಡಿದೆ. ಅಲ್ಲಿನ ಆರ್ಥಿಕ ಸ್ಥಿತಿ ಏನು ಎಂಬೆಲ್ಲಾ ವಿಚಾರಗಳ ಬಗ್ಗೆ ವಿವರಣೆ ನೀಡುತ್ತಿದ್ದರು. ಅದು ಸಾರ್ವಜನಿಕರಿಗೆ ತಿಳಿಯಬಾರದು ಎಂಬ ಕಾರಣಕ್ಕಾಗಿ ಬಿಜೆಪಿಯವರು ವಿಧಾನಮಂಡಲದಲ್ಲಿ ಗದ್ದಲ ಎಬ್ಬಿಸಿ ಅಡ್ಡಿಪಡಿಸಿದ್ದಾರೆ ಎಂದು ದೂರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

36 mins ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

3 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

5 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

10 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

10 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

12 hours ago