ರಾಜ್ಯ

ನಾನು ಎಬಿವಿಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ರಾಜಕೀಯದಲ್ಲಿ ತಮಗೂ ಶತ್ರುಗಳಿದ್ದು, ಕ್ಷುಲ್ಲಕ ವಿಚಾರಗಳಿಗೆ ಅಪಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ತಾವು ಎಬಿವಿಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 35 ವರ್ಷಗಳಿಂದಲೂ ರಾಜಕೀಯ ಜೀವನದಲ್ಲಿದ್ದೇನೆ. ನನಗೆ ಸೈದ್ಧಾಂತಿಕ ಬದ್ಧತೆ ಇದೆ. ಅದನ್ನು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ. ನಾನು ನಿಜವಾದ ಕಾಂಗ್ರೆಸ್ಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ ಎಂದಿದ್ದಾರೆ.

ಇದನ್ನು ಓದಿ: ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ತುಮಕೂರಿನಲ್ಲಿ ರಾಣಿ ಅಬ್ಬಕ್ಕ ಅವರ ಮೆರವಣಿಗೆ ನಡೆದಿತ್ತು. ಅಬ್ಬಕ್ಕ ದೇವಿಗೆ ಹೂವಿನಹಾರ ಹಾಕಿ ಎಂದು ಮನವಿ ಮಾಡಿಕೊಂಡರು. ತಮ್ಮೊಂದಿಗೆ ತಿಪಟೂರಿನ ಶಾಸಕ ಷಡಕ್ಷರಿ ಕೂಡ ಇದ್ದರು. ತಾವು ಕಾರಿನಿಂದ ಇಳಿದು ರಾಣಿ ಅಬ್ಬಕ್ಕ ದೇವಿಗೆ ಪುಷ್ಪ ನಮನ ಸಲ್ಲಿಸಿದ್ದೇನೆ. ಅದರ ಹೊರತಾಗಿ ಎಬಿವಿಪಿಯ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ಇದನ್ನು ವಿವಾದ ಮಾಡುವುದಾದರೆ ಮಾಡಿಕೊಳ್ಳಲಿ, ಅದರಿಂದ ನನಗೇನು ತೊಂದರೆ ಇಲ್ಲ ಎಂದಿದ್ದಾರೆ.

ಪರಮೇಶ್ವರ್ ಏನು ಎಂದು ರಾಜ್ಯದ ಜನರಿಗೆ ಗೊತ್ತಿದೆ. ಇಂತಹ ಕೀಳು ಮಟ್ಟದ ತಂತ್ರಗಾರಿಕೆಗಳನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ. ಪಕ್ಷದ ಒಳಗೆ ಹಾಗೂ ಹೊರಗೆ ಇರುವವರು ಅಪಪ್ರಚಾರ ಮಾಡುವುದು ಸಾಮಾನ್ಯ. ನಾನು ಏನು ಎಂದು ಪದೇ ಪದೇ ಸಾಬೀತುಪಡಿಸುವ ಅಗತ್ಯ ಇಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

11 hours ago