ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದರ ಮತ್ತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಅದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಟೀಕೆ ಮಾಡಿದರು.
ಇನ್ನು ರಾಜ್ಯದ ಹಲವೆಡೆ ಮೈಕ್ರೋ ಫೈನಾನ್ಸ್ನಿಂದ ಕಿರುಕುಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್ನವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೇ ಕಿರುಕುಳ ಕೊಟ್ಟರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸೂಚನೆ ನೀಡಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…