ಕಲಬುರಗಿ: ಬಿಜೆಪಿಯವರು ಗಲಭೆ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೇ, ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ ಮತ್ತು ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ
ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಈ ಲೋಕಸಭೆ ಚುನಾವಣೆಯಲ್ಲಿ ಗೊಂದಲ ಸೃಷ್ಠಿಸಿ ಚುನಾವಣೆ ಮಾಡಬೇಕು ಎಂದು ಸಂಚು ರೂಪಿಸಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ನನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನ ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಪತ್ರ ಫಿನ್ಲ್ಯಾಂಡ್ನಿಂದ ಬಂದಿದೆ ಎಂದು ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಆ ಜೀವ ಬೆದರಿಕೆ ಪತ್ರವನ್ನು ಓದಿದರು. “ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತಹ ವೇಷ ಭೂಷಣ ತೊಟ್ಟರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗು, ನಿನ್ನ ಸೊಕ್ಕು ಹೊಲೆಯ ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಆಶ್ಲೀಲ ಪದ ಬಳಸಿದ್ದಾರೆ. ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ.
ಬೆದರಿಕೆ ಸಂಬಂಧ ಮಾರ್ಚ್ 17ರಂದು ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಿಕಾಸಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ಅದಕ್ಕೆಲ್ಲ ನಾವು ಹೆದರುವುದಿಲ್ಲ ಎಂದರು.
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್ನಲ್ಲಿ…